1:51 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದೊಂದಿಗೆ ಸ್ಪಂದಿಸುವವರ ಜತೆ ಚುನಾವಣೋತ್ತರ ಹೊಂದಾಣಿಕೆ: ಜನಾರ್ಧನ ರೆಡ್ಡಿ

04/04/2023, 20:37

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ನಾವು ಸುಮಾರು 25 ಸೀಟುಗಳನ್ನು ಗೆಲ್ಲಬಹುದು, ನಾವಂತೂ ಸ್ವಂತ ಬಲದಲ್ಲಿ ರಾಜ್ಯದ ಚುಕ್ಕಾಣಿ ಹಿಡಿಯಲು ಸಾಧ್ಯವಿಲ್ಲ. ಯಾರೂ ನಮ್ಮ ಪಕ್ಷದ ಪ್ರಣಾಳಿಕೆಗಳಿಗೆ ಸ್ಪಂದಿಸುತ್ತಾರೋ ಅವರ ಜತೆ ನಮ್ಮ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕೈ ಜೋಡಿಸುತ್ತದೆ ಎಂದು ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ಧನ ರೆಡ್ಡಿ ಹೇಳಿದರು.

ಅವರು ಅಥಣಿ ಪಟ್ಟಣದ ಐಬಿ ರಸ್ತೆಗೆ ಹೊಂದಿಕೊಂಡು ಹಮ್ಮಿಕೊಂಡ ಬೃಹತ್ ಕಾರ್ಯಕರ್ತರ ಸಮಾವೇಶದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು.
ಎಲ್ಲೆಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲಬಹುದು ಅಲ್ಲಲ್ಲಿ ನಾನೇ ಖುದ್ದಾಗಿ ಹೋಗಿ ಪ್ರಚಾರ ಮಾಡುತ್ತಿದ್ದೇನೆ. ಇದೀಗ ಸುಮಾರು 30 ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಆರಂಭವಾಗಿದೆ. ನಾವು ಸುಮಾರು 25 ಕ್ಷೇತ್ರಗಳನ್ನು ಗೆಲ್ಲಬಹುದು. ಅನಂತರ‌ ಬಹುಮತ ಬರದೇ ಇದ್ದಾಗ ನಮ್ಮ ವಿಚಾರಕ್ಕೆ ಸ್ಪಂದಿಸುವ ಯಾವ ಪಕ್ಷವಾದರೂ ಸರಿ, ಅದು ಕಾಂಗ್ರೇಸ್, ಬಿಜೆಪಿ ಯಾದರೂ ಸರಿ‌‌ ನಾವು ಕೈಜೋಡಿಸುತ್ತೆವೆ ಎಂದರು.
ನನ್ನ ಮೇಲೆ ವಿಶ್ವಾಸವಿಟ್ಟು ದಲಿತರು, ಹಿಂದುಗಳು, ಮುಸ್ಲಿಮರು ಸೇರಿದಂತೆ ಅನೇಕರು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಅವರೆಲ್ಲ ವಿಶ್ವಾಸ ಉಳಿಸಿಕೊಳ್ಳುವುದು ನನ್ನ ಕರ್ತವ್ಯ ಅಷ್ಟೆ, ಆದರೆ‌ ನಮ್ಮದು ಕಾಂಗ್ರೇಸ್ಸಿನ ಬಿ‌ ಟೀಮ್ ಅಥವಾ ಬಿಜೆಪಿಯ ಬೀ ಟೀಮ್ ಅಲ್ಲ, ಅದು ಮಾತನಾಡುವವರ ಕಲ್ಪನೆಗೆ ಬಿಟ್ಟಿದ್ದು. ಒಟ್ಟಿನಲ್ಲಿ ಜನಪರ ಆಡಳಿತ ನೀಡುವುದು ನನ್ನ ಗುರಿ ಮತ್ತು ಅಥಣಿಯಲ್ಲಿ‌ ನಮ್ಮ ಅಭ್ಯರ್ಥಿ ಬಸವರಾಜ ಬೀಸನಕೊಪ್ಪ ಅವರ ಗೆಲುವು ಪಕ್ಕಾ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು