1:50 PM Monday22 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಟಿಕೆಟ್ ಕೊಡಬೇಡಿ: ಪ್ರಧಾನಿ ಮೋದಿ, ನಡ್ಡಾ,‌ ಅಮಿತ್ ಶಾ ಸಹಿತ ಬಿಜೆಪಿ ನಾಯಕರಿಗೆ ಪತ್ರ

04/04/2023, 21:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದಿಂದ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಮತ್ತೆ ಟಿಕೆಟ್ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರಿಗೆ ಮೂಡಿಗೆರೆ ಬಿಜೆಪಿ ಕಾರ್ಯಕರ್ತರು ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಗೃಹ ಸಚಿವ ಅಮಿತ್ ಶಾ, ಬಿ.ಎಲ್. ಸಂತೋಷ್, ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆಯಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಅಂತ ಪತ್ರ ಬರೆದಿದ್ದಾರೆ. ಇದರೊಂದಿಗೆ ಮೂಡಿಗೆರೆ ಶಾಸಕ ಕುಮಾರಸ್ವಾಮಿ ವಿರುದ್ಧ ಆಕ್ರೋಶ, ಅಸಮಾಧಾನ ಮುಂದುವರಿದಿದೆ.
10 ಪಾಯಿಂಟ್ ಗಳ ಮಾಹಿತಿಯುಳ್ಳ ಪತ್ರವನ್ನ ಕಾರ್ಯಕರ್ತರು ಮೇಲ್ ಮಾಡಿದ್ದಾರೆ.
ಮೂಡಿಗೆರೆ ತಾಲೂಕಿನ ಪ್ರತಿ ಹೋಬಳಿಯಿಂದಲೂ ಪತ್ರಬರೆಯಲಾಗಿದೆ. ಪ್ರಧಾನಿ ಮೋದಿ ಅವರ ಕಚೇರಿಗೂ ಕಾರ್ಯಕರ್ತರು ಪತ್ರ ಕಳುಹಿಸಿದ್ದಾರೆ.
ಸಂತೋಷ್, ಶೋಭಾ ಅವರಿಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಪತ್ರ ಕಳುಹಿಸಿದ್ದಾರೆ.
ಪಕ್ಷ ವಿರೋಧಿ, ಕಾರ್ಯಕರ್ತರ ಕಡೆಗಣನೆ, ವಿಧಾನಸೌಧದ ಮುಂದೆ ಪಕ್ಷ ಮರ್ಯಾದೆ ಕಳೆದದ್ದು
ನೋವು ಹೇಳಿಕೊಂಡವರ ವಿರುದ್ಧ ತಾನೇ ಬಟ್ಟೆ ಹರಿದುಕೊಂಡು ಶಾಸಕರು ಎಂಬ ಆರೋಪ ಕೂಡ ಕೇಳಿ ಬಂದಿದೆ. ಕುಮಾರಸ್ವಾಮಿ ಅವರು ಆಪ್ತರಿಗೆ ಮಾತ್ರ ಹೆಚ್ಚೆಚ್ಚು ಅನುದಾನ ನೀಡಿದ್ದಾರೆ ಎಂಬ ಆರೋಪವೂ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು