9:53 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ…

ಇತ್ತೀಚಿನ ಸುದ್ದಿ

ಸಜ್ಜನ ರಾಜಕಾರಣಿ ದತ್ತಗೆ ಟಿಕೆಟ್ ಕೊಡದ ಕಾಂಗ್ರೆಸ್: ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಅವಕಾಶ ವಂಚಿತರಿಂದ ಭಿನ್ನಮತ ಸ್ಫೋಟ

06/04/2023, 21:34

ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನ 2ನೇ ಪಟ್ಟಿ ಹೊರಬೀಳುತ್ತಿದ್ದಂತೆ ಕರಾವಳಿಯ ಉಡುಪಿ ಸೇರಿದಂತೆ ಹಲವಡೆ ಭಿನ್ನಮತ ಸ್ಫೋಟಗೊಂಡಿದೆ.
ಹಲವು ಕ್ಷೇತ್ರಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ತಮ್ಮ ಅಸಮಾಧಾನ ಹೊರಗೆಡಹಿದ್ದಾರೆ.
ಉಡುಪಿ, ಕಡೂರು, ಚಿತ್ರದುರ್ಗ, ಕಲಘಟಕಿ, ಗೋಕಾಕ್ ಮುಂತಾದ ಕಡೆಗಳಲ್ಲಿ ಟಿಕೆಟ್ ಕೈತಪ್ಪಿದ ನಾಯಕರು ಹಾಗೂ ಅವರ ಬೆಂಬಲಿಗರು ಭಿನ್ನಮತ ಹೊರಹಾಕಿದ್ದಾರೆ.
ಕಳೆದ 30 ವರ್ಷಗಳಿಂದ ಕಾಂಗ್ರೆಸ್ ನಲ್ಲಿ ದುಡಿಯುತ್ತಿದ್ದ ಕೃಷ್ಣಮೂರ್ತಿ ಆಚಾರ್ಯ ಅವರು ಉಡುಪಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜೀನಾಮೆಗೂ ಮುಂದಾಗಿದ್ದಾರೆ.
ಪ್ರತಿ ಬಾರಿಯೂ ತನಗೆ ಟಿಕೆಟ್ ನೀಡದೆ ವಂಚಿಸಲಾಗುತ್ತಿದೆ. ಈ ಬಾರಿಯೂ ಕೊನೆಯ ಹಂತದಲ್ಲಿ ಟಿಕೆಟ್ ನಿರಾಕರಿಸಲಾಗಿದೆ ಎಂದು ಕೃಷ್ಣಮೂರ್ತಿ ಆಚಾರ್ಯ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಗ್ಗೆ ಚಿಂತನೆ ನಡೆಸಿದ್ದಾರೆ.
ಉಡುಪಿ ವಿಧಾನಸಭೆ ಕ್ಷೇತ್ರದಲ್ಲಿ ಉದ್ಯಮಿ ಪ್ರಸಾದ್ ಕಾಂಚನ್ ಅವರಿಗೆ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್ ನಾಯಕಿ ಸರಳಾ ಕಾಂಚನ್ ಅವರ ಪುತ್ರನಾದ ಪ್ರಸಾದ್ ಅವರಿಗೆ ಟಿಕೆಟ್ ಒಲಿದಿದೆ.
ಕಲಘಟ್ಟಿಯಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರಿಗೆ ಟಿಕೆಟ್ ನೀಡಿದ ಕುರಿತು ನಾಗರಾಜ ಛಬ್ಬಿ ಅಸಮಾಧಾನ ಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಛಬ್ಬಿ ಅವರು ಬೆಂಬಲಿಗರ ಸಭೆ ಕೂಡ ಕರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಅಶೋಕ್ ಪೂಜಾರಿ ಅವರಿಗೆ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಂಡ್ಯದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲಾಗಿದೆ. ಕಡೂರಿನಲ್ಲಿ ವೈ.ಎಸ್. ವಿ. ದತ್ತ ಎಂಬ ಸಜ್ಜನ ರಾಜಕಾರಣಿಗೆ ಟಿಕೆಟ್ ನಿರಾಕರಿಸಿದ ಬಗ್ಗೆ ಕಡೂರು ಮಾತ್ರವಲ್ಲದೆ ಇಡೀ ರಾಜ್ಯದಲ್ಲಿ ಪ್ರಜ್ಞಾವಂತ ಮತದಾರರು ಅಸಮಾಧಾನ ಹೊರಹಾಕಿದ್ದಾರೆ. ಮತ್ತೆ ಜೆಡಿಎಸ್ ಗೆ ಬರುವಂತೆ ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಧನಂಜಯ ಅವರು ದತ್ತರಿಗೆ ಆಹ್ವಾನ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು