12:28 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಟಿಕೆಟ್ ಮಿಸ್: ವೈ.ಎಸ್. ವಿ. ದತ್ತ ನಿವಾಸ ಬಳಿ ಭಾರಿ ಸಂಖ್ಯೆಯಲ್ಲಿ ನೆರೆದ ಅಭಿಮಾನಿಗಳು; ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒತ್ತಾಯ

07/04/2023, 11:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.ಕಾಂ

ಕಡೂರು ವಿಧಾನಸಭೆ ಕ್ಷೇತ್ರದಲ್ಲಿ ವೈ.ಎಸ್.ವಿ ದತ್ತಾ ಅವರಿಗೆ ಕಾಂಗ್ರೆಸ್ ಟಿಕೆಟ್ ಮಿಸ್ ಹಿನ್ನೆಲೆ ಪಕ್ಷದ ವಿರುದ್ಧ ದತ್ತ ಅಭಿಮಾನಿಗಳು, ಕಾರ್ಯಕರ್ತರು ಗರಂ ಆಗಿದ್ದಾರೆ. ದತ್ತ ನಿವಾಸದ ಬಳಿ ರಾತೋರಾತ್ರಿ ಭಾರಿ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಜಮಾಯಿಸಿದ್ದಾರೆ.
ದತ್ತ ಅವರಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಚುನಾವಣೆಗೆ ನಿಲ್ಲುವಂತೆ ದತ್ತಾಗೆ ಅಭಿಮಾನಿಗಳ ಪಟ್ಟು ಹಿಡಿದಿದ್ದಾರೆ. ಕಾಂಗ್ರೆಸ್ ನ 2ನೇ ಪಟ್ಟಿಯಲ್ಲಿ ದತ್ತಗೆ ಟಿಕೆಟ್ ಮಿಸ್ ಆದ ಸುದ್ದಿ ಗೊತ್ತಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಕಡೂರು ಸಮೀಪದ ಯಗಟಿ ಬಳಿ ಇರುವ ಅವರ ನಿವಾದತ್ತ ಧಾವಿಸಿದ್ದಾರೆ. ದತ್ತ ಅಭಿಮಾನಿಗಳು ಈಗಲೂ ಅವರ ನಿವಾಸದತ್ತ ಆಗಮಿಸುತ್ತಿದ್ದಾರೆ.


ದತ್ತ ಅವರು ಗುರುವಾರ ಸಂಜೆ ಬೆಂಗಳೂರಿನಿಂದ ಯಗಟಿ‌ ಗ್ರಾಮದ ಮನೆಗೆ ಆಗಮಿಸಿದ್ದಾರೆ. ಆಗ ದತ್ತ ಅವರಿಗಾಗಿ ಸಾವಿರಾರು ಅಭಿಮಾನಿಗಳು ಕಾದು ಕುಳಿತ್ತಿದ್ದರು.
ಕಾರ್ಯಕರ್ತರು ಅಭಿಮಾನಿಗಳ ಜೊತೆ ಅವರು ಸಭೆ ನಡೆಸಲಿದ್ದಾರೆ. ಚುನಾವಣೆ ಸ್ಪರ್ಧೆ ಬಗ್ಗೆ ತೀರ್ಮಾನಕ್ಕೆ ಎರಡು ದಿನ‌ ಸಮಯ ದತ್ತ ಕೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡ್ಬೇಕಾ ಎಂದು ದತ್ತ ಅಭಿಮಾನಿಗಳು ಪ್ರಶ್ನೆ ಕೇಳುತ್ತಿದ್ದಾರೆ.
ರಾಜ್ಯದಲ್ಲಿರುವ ಬೆರಳೆಣಿಕೆಯ ಸಜ್ಜನ, ಭ್ರಷ್ಟಾಚಾರ ರಹಿತ ರಾಜಕಾರಣಿಗಳಲ್ಲಿ ವೈ.ಎಸ್. ವಿ. ದತ್ತ ಅವರು ಅಗ್ರಪಂಕ್ತಿಯ ನಾಯಕರು. ಕಾಂಗ್ರೆಸ್ ನಲ್ಲಿ ಇವರಂತಹ ಸರಳ, ಶುದ್ಧ ಹಸ್ತದ ನಾಯಕ ಇನ್ನೊಬ್ಬರು ಸಿಗಲಾರರು ಎಂದೇ ಹೇಳಬಹುದು.
ಇವರು ಜನತಾ ದಳದಿಂದ ಶಾಸಕರಾಗಿದ್ದ ಅವಧಿಯಲ್ಲಿ ಬಾಡಿಗೆಯ ಆಟೋರಿಕ್ಷಾದಲ್ಲಿ ವಿಧಾನಸಭೆ ಅಧಿವೇಶನಕ್ಕೆ ತೆರಳುತ್ತಿದ್ದರು. ಶಾಸಕರ ಕಾರು ಪಾರ್ಕಿಂಗ್ ಸ್ಥಳದಲ್ಲಿ ಆಟೋ ಕಂಡು ಬಂದರೆ ದತ್ತ ಅವರು ಆಗಮಿಸಿದ್ದಾರೆ ಎಂದೇ ಅರ್ಥ. ಹಣ, ಆಸ್ತಿ ಮಾಡದ ದತ್ತ ಅವರನ್ನು ಜನತಾ ದಳ ಕೂಡ ಕಡೆಗಣಿಸಿತ್ತು. ಇದೀಗ ಕಾಂಗ್ರೆಸ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ವಿಶ್ವಾಸದ್ರೋಹ ಮಾಡಿದೆ ಎಂದು ಅವರ ಅಭಿಮಾನಿಗಳು ಹೇಳುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು