12:24 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಪತಿಯ ಹಾದಿ ಹಿಡಿದ ಪತ್ನಿ: ಕೆಪಿಸಿಸಿ ಕಾರ್ಯಾಧ್ಯಕ್ಷ ದಿವಂಗತ ಧ್ರುವನಾರಾಯಣ್ ಪತ್ನಿ ವೀಣಾ ಇನ್ನಿಲ್ಲ

07/04/2023, 13:40

ಮೈಸೂರು(reporterkarnataka.com):
ಹೃದಯಾಘಾತದಿಂದ ಇತ್ತೀಚಿಗಷ್ಟೇ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ್ ಅವರ ಪತ್ನಿ ವೀಣಾ(50) ಅನಾರೋಗ್ಯದಿಂದ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಬ್ರೈನ್ ಟ್ಯೂಮರ್ ಗೆ ಚಿಕಿತ್ಸೆ ಪಡೆಯುತ್ತಿದ್ದರು.
ವೀಣಾ ಅವರು ದಿ.ಧ್ರುವನಾರಾಯಣ್ ಅವರ ಅಕ್ಕನ ಮಗಳು. ಧ್ರುವ ನಾರಾಯಣ್ ಮೃತಪಟ್ಟ ಸ್ವಲ್ಪ ದಿನಗಳಲ್ಲೇ ಪತ್ನಿ ನಿಧನರಾಗಿರುವುದು ಪುತ್ರ ದರ್ಶನ್ ಧ್ರುವ ನಾರಾಯಣ್ ಅವರಿಗೆ ಮತ್ತೊಂದು ಆಘಾತ ಉಂಟು ಮಾಡಿದೆ.

ದರ್ಶನ್ ಅವರು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ತಂದೆಯನ್ನು ಕಳೆದುಕೊಂಡಿರುವ ದುಃಖದಲ್ಲಿದ್ದ ಅವರು ಅದರಿಂದ ಚೇತರಿಸಿಕೊಳ್ಳುವ ಮುನ್ನವೇ
ತಾಯಿಯನ್ನು ಕಳೆದುಕೊಂಡಿದ್ದಾರೆ.
ದರ್ಶನ್ ತಮ್ಮ ಧೀರನ್ ತಾಯಿಯ ಆರೈಕೆ ನೋಡಿಕೊಳ್ಳುತ್ತಿದ್ದರು. ಮೃತ ವೀಣಾ ಅವರ ಅಂತ್ಯಕ್ರಿಯೆ ಹೆಗ್ಗವಾಡಿ ಗ್ರಾಮದಲ್ಲಿ ಶನಿವಾರ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು