4:01 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ, ದಕ್ಷಿಣ, ಪುತ್ತೂರು ಕ್ಷೇತ್ರ: ಇನಾಯತ್ ಆಲಿ, ಲೋಬೊ, ಶಕುಂತಳಾ ಶೆಟ್ಟಿಗೆ ಕಾಂಗ್ರೆಸ್ ಟಿಕೆಟ್

08/04/2023, 09:44

ಬೆಂಗಳೂರು(reporterkarnataka.com): ಕರಾವಳಿಯಲ್ಲಿ ತೀವ್ರ ಕುತೂಹಲ ಮೂಡಿಸಿದ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಖನ್ನು ಅಂತಿಮಗೊಳಿಸಲಾಗಿದೆ. ಉತ್ತರದಿಂದ ಇನಾಯತ್ ಆಲಿ, ದಕ್ಷಿಣದಿಂದ ಜೆ. ಆರ್. ಲೋಬೋ ಹಾಗೂ ಪುತ್ತೂರಿನಿಂದ ಶಕುಂತಳಾ ಶೆಟ್ಟಿ ಹೆಸರು ಅಂತಿಮ ಗೊಳಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮಂಗಳೂರು ದಕ್ಷಿಣ ಹಾಗೂ ಪುತ್ತೂರಿಗೆ ಹಳೆ ಮುಖಗಳಾದ ಮಾಜಿ ಶಾಸಕರಾದ ಜೆ.ಆರ್. ಲೋಬೋ ಹಾಗೂ ಶಕುಂತಳಾ ಶೆಟ್ಟಿ ಅವರನ್ನು ಕಣಕ್ಕಿಳಿಸಲಾಗಿದೆ. ಆದರೆ ಮಂಗಳೂರು ಉತ್ತರಕ್ಕೆ ಹೊಸಮುಖಕ್ಜೆ ಮಣೆ ಹಾಕಲಾಗಿದೆ. ಇಲ್ಲಿ ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರಕ್ಕೆ ಮಾಜಿ ಶಾಸಕರು, ಮಾಜಿ ಮೇಯರ್ ಗಳು, ಕಾರ್ಪೋರೇಟರ್ ಸೇರಿದಂತೆ ಡಜನಿಗೂ ಅಧಿಕ ಮಂದಿ ಆಕಾಂಕ್ಷಿಗಳಿದ್ದರು. ಮಂಗಳೂರಿನ ಯುವ ನ್ಯಾಯವಾದಿ, ಸಾಮಾಜಿಕ ಧುರೀಣ ಪದ್ಮರಾಜ್ ಅವರು ಕೂಡ ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ವಿಷಯ ಎತ್ತಿಕೊಂಡು ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದ ಜೆ. ಆರ್. ಲೋಬೊ ಅವರಿಗೆ ಮತ್ತೆ ಟಿಕೆಟ್ ನೀಡಿದೆ. ಹಾಗೆ ಪುತ್ತೂರು ಕ್ಷೇತ್ರವನ್ನು ಮಹಿಳೆಯರಿಗೆ ಬಿಟ್ಟು ಕೊಟ್ಟಿದೆ. ಇಲ್ಲಿ ಶಕುಂತಳಾ ಶೆಟ್ಟಿ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು