2:09 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ, ದಕ್ಷಿಣ, ಪುತ್ತೂರು ಕ್ಷೇತ್ರ: ಇನಾಯತ್ ಆಲಿ, ಲೋಬೊ, ಶಕುಂತಳಾ ಶೆಟ್ಟಿಗೆ ಕಾಂಗ್ರೆಸ್ ಟಿಕೆಟ್

08/04/2023, 09:44

ಬೆಂಗಳೂರು(reporterkarnataka.com): ಕರಾವಳಿಯಲ್ಲಿ ತೀವ್ರ ಕುತೂಹಲ ಮೂಡಿಸಿದ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ ಹಾಗೂ ಪುತ್ತೂರು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಖನ್ನು ಅಂತಿಮಗೊಳಿಸಲಾಗಿದೆ. ಉತ್ತರದಿಂದ ಇನಾಯತ್ ಆಲಿ, ದಕ್ಷಿಣದಿಂದ ಜೆ. ಆರ್. ಲೋಬೋ ಹಾಗೂ ಪುತ್ತೂರಿನಿಂದ ಶಕುಂತಳಾ ಶೆಟ್ಟಿ ಹೆಸರು ಅಂತಿಮ ಗೊಳಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಮಂಗಳೂರು ದಕ್ಷಿಣ ಹಾಗೂ ಪುತ್ತೂರಿಗೆ ಹಳೆ ಮುಖಗಳಾದ ಮಾಜಿ ಶಾಸಕರಾದ ಜೆ.ಆರ್. ಲೋಬೋ ಹಾಗೂ ಶಕುಂತಳಾ ಶೆಟ್ಟಿ ಅವರನ್ನು ಕಣಕ್ಕಿಳಿಸಲಾಗಿದೆ. ಆದರೆ ಮಂಗಳೂರು ಉತ್ತರಕ್ಕೆ ಹೊಸಮುಖಕ್ಜೆ ಮಣೆ ಹಾಕಲಾಗಿದೆ. ಇಲ್ಲಿ ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು ಉತ್ತರ ಮತ್ತು ದಕ್ಷಿಣ ಕ್ಷೇತ್ರಕ್ಕೆ ಮಾಜಿ ಶಾಸಕರು, ಮಾಜಿ ಮೇಯರ್ ಗಳು, ಕಾರ್ಪೋರೇಟರ್ ಸೇರಿದಂತೆ ಡಜನಿಗೂ ಅಧಿಕ ಮಂದಿ ಆಕಾಂಕ್ಷಿಗಳಿದ್ದರು. ಮಂಗಳೂರಿನ ಯುವ ನ್ಯಾಯವಾದಿ, ಸಾಮಾಜಿಕ ಧುರೀಣ ಪದ್ಮರಾಜ್ ಅವರು ಕೂಡ ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ವಿಷಯ ಎತ್ತಿಕೊಂಡು ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯದ ಜೆ. ಆರ್. ಲೋಬೊ ಅವರಿಗೆ ಮತ್ತೆ ಟಿಕೆಟ್ ನೀಡಿದೆ. ಹಾಗೆ ಪುತ್ತೂರು ಕ್ಷೇತ್ರವನ್ನು ಮಹಿಳೆಯರಿಗೆ ಬಿಟ್ಟು ಕೊಟ್ಟಿದೆ. ಇಲ್ಲಿ ಶಕುಂತಳಾ ಶೆಟ್ಟಿ ಅವರಿಗೆ ಮತ್ತೆ ಅವಕಾಶ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು