9:30 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ…

ಇತ್ತೀಚಿನ ಸುದ್ದಿ

ಕೇವಲ 24 ತಾಸಿನೊಳಗೆ ಮಾತು ಬದಲಾಯಿಸಿದ ಸ್ವಾಮೀಜಿ!: ನಿನ್ನೆ ಕುಮಠಳ್ಳಿ ಪರ!, ಇಂದು ಸವದಿ ಪರ!

08/04/2023, 20:54

ರಾಹುಲ್ ಅಥಣಿ ಬೆಳಗಾವಿ

info.reporterkarnataka gmail.com): ಧರ್ಮಕ್ಕೂ ರಾಜಕೀಯಕ್ಕೂ ಬಹಳ ನಂಟು. ಸ್ವಾಮೀಜಿಗಳು, ಪೀಠಾಧಿಪತಿಗಳು ರಾಜಕಾರಣಿಗಳನ್ನು ಬೆಂಬಲಿಸುವುದು, ಅವರ ಪರವಾಗಿ ಸಭೆ ನಡೆಸುವುದು ಮಾಮೂಲಿಯಾಗಿ ಹೋಗಿದೆ. ಹಾಗೆ ಸ್ವಾಮೀಜಿಯವರೊಬ್ಬರು 24 ತಾಸಿನೊಳಗೆ ಮಾತು ಬದಲಾಯಿಸಿ ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದ್ದಾರೆ.

ಪಂಚಮಸಾಲಿ ಪೀಠದ ಜಗದ್ಗುರು ಮಹಾದೇವ ಶಿವಾಚಾರ್ಯ ಶ್ರೀಗಳು ನಿನ್ನೆ ದಿನ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಹಾಲಿ ಶಾಸಕ ಮಹೇಶ್ ಕುಮಠಳ್ಳಿ ಪರ ಬ್ಯಾಟಿಂಗ್ ನಡೆದಿದ್ದರು. ಆದರೆ ಇವತ್ತು ಉಲ್ಟಾ ಹೊಡೆದು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪರ ಹೇಳಿಕೆ ನೀಡಿದ್ದಾರೆ. ದಿನಕ್ಕೊಂದುದು ಹೇಳಿಕೆ ನೀಡುವ ಮೂಲಕ ಮಹಾದೇವ ಶಿವಾಚಾರ್ಯ ಸ್ವಾಮೀಜಿ ಅವರು ಭಕ್ತರು ಮೂಗಿನ ಮೇಲೆ ಬೆರಳಿಡುವಂತೆ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಸ್ವಾಮೀಜಿ ದ್ವಂದ್ವ ನಿಲುವು ಪ್ರಕಟಿಸಿದ್ದಾರೆ.
ಲಕ್ಷ್ಮಣ ಸವದಿ ಅವರು ಇತ್ತಿಚೆಗೆ ಅಥಣಿಯಲ್ಲಿ ಮಾತನಾಡಿ ಪಂಚಮಸಾಲಿ ನನ್ನ ಬೆನ್ನಿಗೆ ಇದೆ ಎಂಬ ಹೇಳಿಕೆ ನೀಡಿದ್ದರು. ಅದಕ್ಕೆ ಸ್ವಾಮೀಜಿಯವರು ನಿನ್ನೆ ಪ್ರತಿಕ್ರಿಯಿಸಿ, ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಅಲ್ಲಿ ಮಹೇಶ ಕುಮಠಳ್ಳಿ ಪರವಾಗಿ ಪಂಚಮಸಾಲಿ ಸಮಾಜ ಇದೆ ಎಂದು ಹೇಳಿದ್ದರು.
ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಶುಕ್ರವಾರ ಪಂಚಮಸಾಲಿ ಮಠಾಧೀಶರ ಒಕ್ಕೂಟದ ಆಶ್ರಯದಲ್ಲಿ 20ಕ್ಕೂ ಅಧಿಕ ಶ್ರೀಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ ಸ್ವಾಮೀಜಿ ಈ ಹೇಳಿಕೆ ನೀಡಿದ್ದರು.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ವಿವಿಧ ಪಕ್ಷಗಳು ನಮ್ಮ ಸಮಾಜದ ಮುಖಂಡರಿಗೆ ಟಿಕೇಟ್ ನೀಡುತ್ತಿವೆ. ನಮ್ಮ ಸಮಾಜ ಜನರು ಮೊದಲು ನಮ್ಮ ಸಮಾಜದ ಅಭ್ಯರ್ಥಿಗಳ ಬೆಂಬಲಕ್ಕೆ ನಿಂತು ಸಮಾಜದವರನ್ನು ಬೆಳೆಸಬೇಕು. ಅದೇ ರೀತಿ ಯಾರೋ ಕೆಲವು ಜನರನ್ನು ಕೇಳಿ ಇಡೀ ಸಮಾಜ ನಮ್ಮ ಬೆಂಬಲಕ್ಕೆ ಇದೆ ಎಂದು ಅವರು ಹೇಳಿಕೆ ಕೊಡುತ್ತಿರುವುದು ಅವರಿಗೆ ಶೋಭೆ ತರುವಂತಹದುಲ್ಲ ಎಂದು ಹೇಳಿದರು. ಈ ವೇಳೆ ಬೆಂಗಳೂರಿನ ಆರೂಢ ಭಾರತಿ ಶ್ರೀಗಳು, ರಾಮೋಹಳ್ಳಿಯ ಸಿದ್ಧಲಿಂಗ ಶ್ರೀಗಳು, ದತ್ತಪೀಠದ ಬಾಪೂಜಿ ಶ್ರೀಗಳು, ಕುಂಚನೂರಿನ ಕಮರಿಮಠದ ಸಿದ್ಧಲಿಂಗ ದೇವರು, ವಿಜಯಪುರ ಯೊಗೇಶ್ವರಿ ಮಾತಾಜಿ, ಹಿಪ್ಪರಗಿಯ ಸಿದ್ಧಾರೂಡ ಶ್ರೀ, ಸಿರಬೂರಿನ ಕಲ್ಮೇಶ್ವರ ಮಹಾರಾಜರು, ನವಲಗುಂದದ ಬಸವಾನಂದ ಶ್ರೀಗಳು, ಗೋಕಾಕಿನ ಗುರುಬಸವ ಶ್ರೀಗಳು ಸೇರಿದಂತೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು