8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ: ಕೈ ಪಾಳದಲ್ಲಿ ಕ್ಷಿಪ್ರ ಬೆಳವಣಿಗೆ?; ಮಾಜಿ ಮೇಯರ್ ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?

08/04/2023, 22:00

ಮಂಗಳೂರು(reporterkarnataka.com): ಮೇಯರ್ ಆಗಿದ್ದಾಗ ಮಸಾಜ್ ಸೆಂಟರ್, ಸ್ಕಿಲ್ ಗೇಮ್ ಗಳ ಮೇಲೆ ಸದಾ ದಾಳಿ ನಡೆಸುವ ಮೂಲಕ ಮಂಗಳೂರಿನ ಜನ ಮಾನಸದಲ್ಲಿ ಭದ್ರವಾಗಿ ನೆಲೆಯೂರಿದ್ದ ಕವಿತಾ ಸನಿಲ್ ಅವರು ದೀರ್ಘಕಾಲದ ಬಳಿಕ ಮತ್ತೆ ಪ್ರವರ್ಧಮಾನಕ್ಕೆ ಬಂದಿದ್ದಾರೆ. ಮಂಗಳೂರು ದಕ್ಷಿಣ ಕ್ಚೇತ್ರದಿಂದ ಸ್ಪರ್ಧಿಸಲು ಅರ್ಜಿ ಸಲ್ಲಿಸಿದ್ದ ಕವಿತಾ ಸನಿಲ್ ಅವರು ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಲು ಸಜ್ಜಾಗಿದ್ದಾರೆ. ಕಾಂಗ್ರೆಸ್ ನಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ.
ಕರಾಟೆಯಲ್ಲಿ ಬ್ಲ್ಯಾಕ್ ಬೆಲ್ಟ್ ಪಡೆದ ಪ್ರಥಮ ಮಹಿಳೆ ಎಂದು ಹೆಗ್ಗಳಿಕೆಯ ಪಾತ್ರವಾಗಿದ್ದ ಕವಿತಾ ಸನಿಲ್ ಮಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಮಂಗಳೂರು ದಕ್ಷಿಣ ದಲ್ಲಿ ಸುಮಾರು 60 ಸಾವಿರ ಮತದಾರರನ್ನು ಹೊಂದಿರುವ ಬಿಲ್ಲವ ಸಮುದಾಯಕ್ಕೆ ಸೇರಿದವರು. ಬಿಲ್ಲವ ಸಮುದಾಯ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಬಿಲ್ಲವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂಬ ಹಕ್ಕೊತ್ತಾಯ ಈಗಾಗಲೇ ಸಮುದಾಯದಿಂದ ವ್ಯಕ್ತವಾಗಿದೆ. ಆದರೆ ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತ ಕ್ರಿಶ್ಚನ್ ಸಮುದಾಯಕ್ಕೆ ಸೇರಿದ ಜೆ. ಆರ್. ಲೋಬೋ ಅವರಿಗೆ ಟಿಕೆಟ್ ಅಂತಿಮಗೊಳಿಸಲಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿರುವುದು ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ. ಇದನ್ನೆಲ್ಲ ಗಮನದಲ್ಲಿಟ್ಟುಕೊಂಡೇ ಕವಿತಾ ಸನಿಲ್ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಕವಿತಾ ಸನಿಲ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ ಮಂಗಳೂರು ದಕ್ಷಿಣದಲ್ಲೂ ಬಂಡಾಯದ ಬಿಸಿ ಕಾಂಗ್ರೆಸ್ ಗೆ ತಟ್ಟಿದಂತಾಗುತ್ತದೆ. ಮೊದಲೇ ಕರಾವಳಿ ಭಾಗದಲ್ಲಿ ಹೀನಾಯ ಸೋಲು ಕಂಡಿರುವ ಕಾಂಗ್ರೆಸ್ ಪಕ್ಷಕ್ಕೆ ಇನ್ನಷ್ಟು ಹಿನ್ನಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು