10:17 PM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ದಿಲ್ಲಿಗೆ ಶಿಫ್ಟ್ ಆದ ಬಿಜೆಪಿ ಟಿಕೆಟ್ ಹಂಚಿಕೆ ಪ್ರಕ್ರಿಯೆ: ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಇನ್ ಡೇಂಜರ್?

08/04/2023, 23:44

ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಟಿಕೆಟ್ ಹಂಚಿಕೆ ಪ್ರಕ್ರಿಯೆ ರಾಜ್ಯದಿಂದ ದೆಹಲಿಗೆ ಶಿಫ್ಟ್ ಆಗಿದೆ. ಹಾಗೆ ಟಕೆಟ್ ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿನವರು ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಲ್ಲಿಗೆ ಹೋಗಿದ್ದಾರೆ. ಶುಕ್ರವಾರದಿಂದ ಆರಂಭಗೊಂಡ ಎರಡು ದಿನಗಳ ಸಂಸದೀಯ ಮಂಡಳಿಯ ಸಭೆಯಲ್ಲಿ ಅಂತಿಮವಾಗಿ ಚರ್ಚಿಸಿ, ಅಳೆದು ತೂಗಿ ಟಿಕೆಟ್ ವಿತರಿಸಲು ಬಿಜೆಪಿ ನಿರ್ಧರಿಸಿದೆ.

ಗುಜರಾತ್ ಮಾದರಿ ಅನುಸರಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರುವುದು ಬಿಜೆಪಿಯ ಕಾರ್ಯತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ 75 ವರ್ಷ ವಯಸ್ಸಾದ ನಾಯಕರಿಗೆ ಹಾಗೂ ಈ ಬಾರಿ ಗೆಲ್ಲುವುದು ಕಷ್ಟ ಎಂದು ಅಂದಾಜಿಸಲಾದ ಸುಮಾರು 27 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಇದರಲ್ಲಿ ಹಾಲಿ ಸಚಿವರು ಕೂಡ ಸೇರಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಗೆ ಸೇರಿದ ಸಚಿವರು ಕೂಡ ಇದ್ದಾರೆ ಎನ್ನುವುದು ವಿಶೇಷವಾಗಿದೆ. ಅದೇ ರೀತಿ ಕರಾವಳಿಯ 3 ಜಿಲ್ಲೆಗಳಿಂದ 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ. ಇದರಲ್ಲಿ ದ.ಕ‌. ಜಿಲ್ಲೆಯ 3 ಮಂದಿ ಶಾಸಕರಿದ್ದಾರೆ ಎಂದು ತಿಳಿದು ಬಂದಿದೆ.

ಟಿಕೆಟ್ ಪಡೆಯಲು ಬಿಜೆಪಿ ಹಾಲಿ ಶಾಸಕರು ಏನೆಲ್ಲ ಕಸರತ್ತಿನಲ್ಲಿ ತೊಡಗಿದ್ದಾರೆ. ಆದರೆ ಯಾವುದೇ ಪ್ರಭಾವ ಬಿಜೆಪಿ ಹೈಕಮಾಂಡ್ ಮುಂದೆ ವರ್ಕ್ ಔಟ್ ಆಗೋಲ್ಲ. ಪಕ್ಷ ಆರೆಸ್ಸೆಸ್ ಮೂಲಕ ನಡೆಸಿದ ಆಂತರಿಕ ಸರ್ವೇ ವರದಿ ಪ್ರಕಾರವೇ ಟಿಕೆಟ್ ನೀಡಲು ಪಕ್ಷದ ಹೈಕಮಾಂಡ್ ತೀರ್ಮಾನಿಸಿದೆ. 2018ರ ಚುನಾವಣೆಯಲ್ಲಿ ಹೊಸ ಮುಖಗಳನ್ನು ಅಖಾಡಕ್ಕಿಳಿಸಿ ಯಶಸ್ವಿ ಕಂಡಿರುವ ಬಿಜೆಪಿ ಈ ಬಾರಿಯ ಚುನಾವಣೆಯಲ್ಲೂ ಅದೇ ತಂತ್ರಗಾರಿಕೆ ಅನುಸರಿಸಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು