1:40 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ದಿಲ್ಲಿಗೆ ಶಿಫ್ಟ್ ಆದ ಬಿಜೆಪಿ ಟಿಕೆಟ್ ಹಂಚಿಕೆ ಪ್ರಕ್ರಿಯೆ: ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಇನ್ ಡೇಂಜರ್?

08/04/2023, 23:44

ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಟಿಕೆಟ್ ಹಂಚಿಕೆ ಪ್ರಕ್ರಿಯೆ ರಾಜ್ಯದಿಂದ ದೆಹಲಿಗೆ ಶಿಫ್ಟ್ ಆಗಿದೆ. ಹಾಗೆ ಟಕೆಟ್ ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿನವರು ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಲ್ಲಿಗೆ ಹೋಗಿದ್ದಾರೆ. ಶುಕ್ರವಾರದಿಂದ ಆರಂಭಗೊಂಡ ಎರಡು ದಿನಗಳ ಸಂಸದೀಯ ಮಂಡಳಿಯ ಸಭೆಯಲ್ಲಿ ಅಂತಿಮವಾಗಿ ಚರ್ಚಿಸಿ, ಅಳೆದು ತೂಗಿ ಟಿಕೆಟ್ ವಿತರಿಸಲು ಬಿಜೆಪಿ ನಿರ್ಧರಿಸಿದೆ.

ಗುಜರಾತ್ ಮಾದರಿ ಅನುಸರಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರುವುದು ಬಿಜೆಪಿಯ ಕಾರ್ಯತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ 75 ವರ್ಷ ವಯಸ್ಸಾದ ನಾಯಕರಿಗೆ ಹಾಗೂ ಈ ಬಾರಿ ಗೆಲ್ಲುವುದು ಕಷ್ಟ ಎಂದು ಅಂದಾಜಿಸಲಾದ ಸುಮಾರು 27 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಇದರಲ್ಲಿ ಹಾಲಿ ಸಚಿವರು ಕೂಡ ಸೇರಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಗೆ ಸೇರಿದ ಸಚಿವರು ಕೂಡ ಇದ್ದಾರೆ ಎನ್ನುವುದು ವಿಶೇಷವಾಗಿದೆ. ಅದೇ ರೀತಿ ಕರಾವಳಿಯ 3 ಜಿಲ್ಲೆಗಳಿಂದ 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ. ಇದರಲ್ಲಿ ದ.ಕ‌. ಜಿಲ್ಲೆಯ 3 ಮಂದಿ ಶಾಸಕರಿದ್ದಾರೆ ಎಂದು ತಿಳಿದು ಬಂದಿದೆ.

ಟಿಕೆಟ್ ಪಡೆಯಲು ಬಿಜೆಪಿ ಹಾಲಿ ಶಾಸಕರು ಏನೆಲ್ಲ ಕಸರತ್ತಿನಲ್ಲಿ ತೊಡಗಿದ್ದಾರೆ. ಆದರೆ ಯಾವುದೇ ಪ್ರಭಾವ ಬಿಜೆಪಿ ಹೈಕಮಾಂಡ್ ಮುಂದೆ ವರ್ಕ್ ಔಟ್ ಆಗೋಲ್ಲ. ಪಕ್ಷ ಆರೆಸ್ಸೆಸ್ ಮೂಲಕ ನಡೆಸಿದ ಆಂತರಿಕ ಸರ್ವೇ ವರದಿ ಪ್ರಕಾರವೇ ಟಿಕೆಟ್ ನೀಡಲು ಪಕ್ಷದ ಹೈಕಮಾಂಡ್ ತೀರ್ಮಾನಿಸಿದೆ. 2018ರ ಚುನಾವಣೆಯಲ್ಲಿ ಹೊಸ ಮುಖಗಳನ್ನು ಅಖಾಡಕ್ಕಿಳಿಸಿ ಯಶಸ್ವಿ ಕಂಡಿರುವ ಬಿಜೆಪಿ ಈ ಬಾರಿಯ ಚುನಾವಣೆಯಲ್ಲೂ ಅದೇ ತಂತ್ರಗಾರಿಕೆ ಅನುಸರಿಸಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು