2:10 PM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ದಿಲ್ಲಿಗೆ ಶಿಫ್ಟ್ ಆದ ಬಿಜೆಪಿ ಟಿಕೆಟ್ ಹಂಚಿಕೆ ಪ್ರಕ್ರಿಯೆ: ದ.ಕ. ಜಿಲ್ಲೆಯ 3 ಮಂದಿ ಹಾಲಿ ಶಾಸಕರು ಇನ್ ಡೇಂಜರ್?

08/04/2023, 23:44

ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದ ಟಿಕೆಟ್ ಹಂಚಿಕೆ ಪ್ರಕ್ರಿಯೆ ರಾಜ್ಯದಿಂದ ದೆಹಲಿಗೆ ಶಿಫ್ಟ್ ಆಗಿದೆ. ಹಾಗೆ ಟಕೆಟ್ ಆಕಾಂಕ್ಷಿ ಶಾಸಕರಲ್ಲಿ ಹೆಚ್ಚಿನವರು ರಾಷ್ಟ್ರ ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಿಲ್ಲಿಗೆ ಹೋಗಿದ್ದಾರೆ. ಶುಕ್ರವಾರದಿಂದ ಆರಂಭಗೊಂಡ ಎರಡು ದಿನಗಳ ಸಂಸದೀಯ ಮಂಡಳಿಯ ಸಭೆಯಲ್ಲಿ ಅಂತಿಮವಾಗಿ ಚರ್ಚಿಸಿ, ಅಳೆದು ತೂಗಿ ಟಿಕೆಟ್ ವಿತರಿಸಲು ಬಿಜೆಪಿ ನಿರ್ಧರಿಸಿದೆ.

ಗುಜರಾತ್ ಮಾದರಿ ಅನುಸರಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಏರುವುದು ಬಿಜೆಪಿಯ ಕಾರ್ಯತಂತ್ರವಾಗಿದೆ. ಈ ಹಿನ್ನೆಲೆಯಲ್ಲಿ 75 ವರ್ಷ ವಯಸ್ಸಾದ ನಾಯಕರಿಗೆ ಹಾಗೂ ಈ ಬಾರಿ ಗೆಲ್ಲುವುದು ಕಷ್ಟ ಎಂದು ಅಂದಾಜಿಸಲಾದ ಸುಮಾರು 27 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಯಿದೆ. ಇದರಲ್ಲಿ ಹಾಲಿ ಸಚಿವರು ಕೂಡ ಸೇರಿದ್ದಾರೆ. ಬೆಂಗಳೂರು ನಗರ ವ್ಯಾಪ್ತಿಗೆ ಸೇರಿದ ಸಚಿವರು ಕೂಡ ಇದ್ದಾರೆ ಎನ್ನುವುದು ವಿಶೇಷವಾಗಿದೆ. ಅದೇ ರೀತಿ ಕರಾವಳಿಯ 3 ಜಿಲ್ಲೆಗಳಿಂದ 7 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ. ಇದರಲ್ಲಿ ದ.ಕ‌. ಜಿಲ್ಲೆಯ 3 ಮಂದಿ ಶಾಸಕರಿದ್ದಾರೆ ಎಂದು ತಿಳಿದು ಬಂದಿದೆ.

ಟಿಕೆಟ್ ಪಡೆಯಲು ಬಿಜೆಪಿ ಹಾಲಿ ಶಾಸಕರು ಏನೆಲ್ಲ ಕಸರತ್ತಿನಲ್ಲಿ ತೊಡಗಿದ್ದಾರೆ. ಆದರೆ ಯಾವುದೇ ಪ್ರಭಾವ ಬಿಜೆಪಿ ಹೈಕಮಾಂಡ್ ಮುಂದೆ ವರ್ಕ್ ಔಟ್ ಆಗೋಲ್ಲ. ಪಕ್ಷ ಆರೆಸ್ಸೆಸ್ ಮೂಲಕ ನಡೆಸಿದ ಆಂತರಿಕ ಸರ್ವೇ ವರದಿ ಪ್ರಕಾರವೇ ಟಿಕೆಟ್ ನೀಡಲು ಪಕ್ಷದ ಹೈಕಮಾಂಡ್ ತೀರ್ಮಾನಿಸಿದೆ. 2018ರ ಚುನಾವಣೆಯಲ್ಲಿ ಹೊಸ ಮುಖಗಳನ್ನು ಅಖಾಡಕ್ಕಿಳಿಸಿ ಯಶಸ್ವಿ ಕಂಡಿರುವ ಬಿಜೆಪಿ ಈ ಬಾರಿಯ ಚುನಾವಣೆಯಲ್ಲೂ ಅದೇ ತಂತ್ರಗಾರಿಕೆ ಅನುಸರಿಸಲಿದೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು