7:16 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

14/05/2021, 19:06

ಮಂಗಳೂರು(reporterkarnataka news):

ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ.

ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್ಟಾಂಡ್ ಗಳಲ್ಲಿ ಟೆಂಟ್ ಹಾಕಿ, ಬಿಸಿಲು ಮಳೆಗಳಿಗೆ ಕಷ್ಟ ಪಟ್ಟು ಕಾರ್ಯಾ ನಿರ್ವಹಿಸುವ ಪೋಲಿಸರು ಸೋಂಕಿಗೆ ಒಳಗಾಗುತ್ತಿದ್ದು, ಅವರ ಆರೋಗ್ಯ ಕಾಪಾಡಲು ಪೋಲಿಸ್  ಕಮಿಷನರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.  


ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.

ಪೊಲೀಸ್ ಕಮಿಷನರ್ ಶಶಿಕುಮಾರ್‌ ಮಾತನಾಡಿ, ಈಗಾಗಲೆ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈಗ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ.  ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.

ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ಊಟ, ತಿಂಡಿ, ಚಹಾವನ್ನು  ರೆಡಿ ಮಾಡಿ ಕೊಡುತ್ತಿದ್ದಾರೆ. ನೀರು, ಬೆಡ್ ವ್ಯವಸ್ಥೆ ಎಲ್ಲ   ವ್ಯವಸ್ಥೆ  ಇದೆ.  ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು