9:28 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

14/05/2021, 19:06

ಮಂಗಳೂರು(reporterkarnataka news):

ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ.

ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್ಟಾಂಡ್ ಗಳಲ್ಲಿ ಟೆಂಟ್ ಹಾಕಿ, ಬಿಸಿಲು ಮಳೆಗಳಿಗೆ ಕಷ್ಟ ಪಟ್ಟು ಕಾರ್ಯಾ ನಿರ್ವಹಿಸುವ ಪೋಲಿಸರು ಸೋಂಕಿಗೆ ಒಳಗಾಗುತ್ತಿದ್ದು, ಅವರ ಆರೋಗ್ಯ ಕಾಪಾಡಲು ಪೋಲಿಸ್  ಕಮಿಷನರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.  


ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.

ಪೊಲೀಸ್ ಕಮಿಷನರ್ ಶಶಿಕುಮಾರ್‌ ಮಾತನಾಡಿ, ಈಗಾಗಲೆ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈಗ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ.  ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.

ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ಊಟ, ತಿಂಡಿ, ಚಹಾವನ್ನು  ರೆಡಿ ಮಾಡಿ ಕೊಡುತ್ತಿದ್ದಾರೆ. ನೀರು, ಬೆಡ್ ವ್ಯವಸ್ಥೆ ಎಲ್ಲ   ವ್ಯವಸ್ಥೆ  ಇದೆ.  ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು