2:01 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಪೊಲೀಸ್ ಸಿಬಂದಿಗಳಿಗೆ 40 ಬೆಡ್ ಗಳ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ

14/05/2021, 19:06

ಮಂಗಳೂರು(reporterkarnataka news):

ಜನರ ರಕ್ಷಣೆಗಾಗಿ ಹಗಲು ರಾತ್ರಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ಪೊಲೀಸರ ಆರೋಗ್ಯ ರಕ್ಷಣೆಗೆ ಕಮಿಷನರ್ ಎನ್. ಶಶಿಕುಮಾರ್ ಮುಂದಾಗಿದ್ದಾರೆ.

ಜನಸಾಮಾನ್ಯರನ್ನು ಮನೆಯಲ್ಲಿ ಉಳಿಸಿ, ದಿನದ 24 ಗಂಟೆಯೂ ಮನೆ ಮಠ ತೊರೆದು ರಸ್ತೆ ಬದಿ,ಬಸ್ ಸ್ಟಾಂಡ್ ಗಳಲ್ಲಿ ಟೆಂಟ್ ಹಾಕಿ, ಬಿಸಿಲು ಮಳೆಗಳಿಗೆ ಕಷ್ಟ ಪಟ್ಟು ಕಾರ್ಯಾ ನಿರ್ವಹಿಸುವ ಪೋಲಿಸರು ಸೋಂಕಿಗೆ ಒಳಗಾಗುತ್ತಿದ್ದು, ಅವರ ಆರೋಗ್ಯ ಕಾಪಾಡಲು ಪೋಲಿಸ್  ಕಮಿಷನರ್ ಪೊಲೀಸ್ ಸಿಬಂದಿಗಾಗಿಯೇ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭಿಸಿದ್ದಾರೆ.  


ನಗರದ ಅಲೋಶಿಯಸ್ ಕಾಲೇಜು ಆವರಣದಲ್ಲಿರುವ ಹಾಸ್ಟೆಲ್ ಕಟ್ಟಡದಲ್ಲಿ 40 ಬೆಡ್ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ ರೆಡಿ ಮಾಡಲಾಗಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಉದ್ಘಾಟನೆ ನೆರವೇರಿಸಿದರು.

ಪೊಲೀಸ್ ಕಮಿಷನರ್ ಶಶಿಕುಮಾರ್‌ ಮಾತನಾಡಿ, ಈಗಾಗಲೆ ಮಂಗಳೂರಿನಲ್ಲಿ 62 ಮಂದಿಗೆ ಕೋವಿಡ್ ಸೋಂಕು ತಗಲಿದೆ. ಈಗ 16 ಮಂದಿ ಗುಣಮುಖರಾಗಿದ್ದು, 42 ಮಂದಿ ಹೋಮ್ ಐಸೋಲೇಶನಲ್ಲಿದ್ದಾರೆ.  ಮನೆಯಲ್ಲಿ ಸೂಕ್ತ ವ್ಯವಸ್ಥೆ ಇಲ್ಲದವರು, ಏನಾದ್ರೂ ಆರೋಗ್ಯ ತೊಂದರೆ ಇದ್ದವರು ಇಲ್ಲಿ ಬಂದು ಸೇರಿಕೊಳ್ಳಬಹುದು. ಇಲ್ಲಿ 24 ಗಂಟೆ ಕಾಲ ವೈದ್ಯರು ಮತ್ತು ನರ್ಸ್ ಗಳು ಇರಲಿದ್ದು, ರೋಗಿಗಳ ಆರೈಕೆ ಮಾಡಲಿದ್ದಾರೆ.

ಅಲೋಶಿಯಸ್ ಕಾಲೇಜಿನ ಹಾಸ್ಟೆಲ್ ವತಿಯಿಂದ ಊಟ, ತಿಂಡಿ, ಚಹಾವನ್ನು  ರೆಡಿ ಮಾಡಿ ಕೊಡುತ್ತಿದ್ದಾರೆ. ನೀರು, ಬೆಡ್ ವ್ಯವಸ್ಥೆ ಎಲ್ಲ   ವ್ಯವಸ್ಥೆ  ಇದೆ.  ಮಧುಮೇಹ, ಬಿಪಿ ಇನ್ನಿತರ ಸಣ್ಣಪುಟ್ಟ ಕಾಯಿಲೆಗಳಿಂದ ಬಳಲುತ್ತಿರುವ ಪೊಲೀಸ್ ಇಲಾಖೆಯಲ್ಲಿರುವ ಸೋಂಕಿತರು ಮತ್ತು ಅವರ ಸಂಬಂಧಿಕರಿಗಾಗಿ ಈ ಕೋವಿಡ್ ಕೇರ್ ಆರಂಭಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು