7:59 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಸುಳ್ಯ: 6 ಬಾರಿ ಗೆದ್ದ ಅಂಗಾರ ಎಲೆಕ್ಷನ್ ಪಾಲಿಟಿಕ್ಸ್ ಗೆ ಗುಡ್ ಬೈ ಹೇಳುತ್ತಾರಾ? ಶಶಿ ಸುಳ್ಳಿ ನೂತನ ಅಭ್ಯರ್ಥಿಯೇ?

09/04/2023, 19:54

ಸುಳ್ಯ(reporterkarnataka.com): ಆರು ಬಾರಿ ಗೆದ್ದು 30 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಸಚಿವ ಅಂಗಾರ ಅವರಿಗೆ ಈ ಬಾರಿ ಕೊಕ್ ನೀಡುವ ಕುರಿತು ಬಿಜೆಪಿಯಲ್ಲಿ ತೀವ್ರ ಚಿಂತನೆ ನಡೆದಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ನಾಯಕರಾಗಿ ಸುಳ್ಯ ಬಿಜೆಪಿಯಿಂದ ಯಾರು ಮೂಡಿ ಬರಲಿದ್ದಾರೆ ಎಂಬ ಕೌತುಕ ಇಡೀ ಕರಾವಳಿಯಲ್ಲಿ ಆವರಿಸಿದೆ.
30 ವರ್ಷಗಳಿಂದ ಒಂದೇ ಪಕ್ಷವನ್ನು ಪ್ರತಿನಿಧಿಸಿ 6 ಬಾರಿ ಶಾಸಕರಾಗಿ, ಕೊನೆಗೂ ಸಚಿವರಾದ ಅಂಗಾರ ಅವರನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳಿಸಲು ಜಿಲ್ಲಾ ಹಾಗೂ ರಾಜ್ಯಮಟ್ಡದ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೊಸ ತಲೆಮಾರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪಕ್ಷ ಈ ಕುರಿತು ಚಿಂತನೆ ನಡೆಸಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ಅಭ್ಯರ್ಥಿ ಯಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಲಿದೆ? ಕಾಂಗ್ರೆಸ್ ತರಹ ಹೊರಗಿನಿಂದ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳಲಿದೆಯೇ? ಅಲ್ಲ, ಸ್ಥಳೀಯ ಅಭ್ಯರ್ಥಿಯನ್ನೇ ಬೆಳೆಸಿ ನಾಯಕನಾಗಿ ಬೆಳೆಸಲಿದಯಾ ? ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ದೊರಕುತ್ತದೆ. ಅಕಸ್ಮಾತ್ ಅಂಗಾರ ಅವರ ಅಭ್ಯರ್ಥಿ ತನವನ್ನು ಬದಲಾಯಿಸಿದರೆ ಅವರ ಜಾಗಕ್ಕೆ ಸ್ಥಳೀಯ ವ್ಯಕ್ತಿಯನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗುತ್ತದೆ. ಇಂತಹ ಅಭ್ಯರ್ಥಿ ಗಳಲ್ಲಿ ಪ್ರಮುಖ ಹೆಸರು ಶಶಿಧರ ಸುಳ್ಳಿ ಯಾನೆ ಶಶಿ ಸುಳ್ಳಿ.
ಆರೆಸ್ಸೆಸ್ ಗರಡಿಯಲ್ಲಿ ಪಳಗಿದ ಶಶಿ ಸುಳ್ಳಿ ಎಂಬ ತರುಣನನ್ನು ಮುನ್ನಲೆಗೆ ತರಲು ಆರೆಸ್ಸೆಸ್ ಎಲ್ಲ ಸಿದ್ದತೆ ನಡೆಸಿದೆ ಎನ್ನಲಾಗಿದೆ.
ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಸುಳ್ಳಿ ನಿವಾಸಿ ಶಶಿ ಸುಳ್ಳಿ ಪಿಯುಸಿ ಕಲಿತ ಆಟೋ ಚಾಲಕ. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಕಾರ್ಯಕರ್ತ. ಸಂಘದ ಒಟಿಸಿಯನ್ನು ಪೂರೈಸಿದವರು. ಶಾಸಕ ಅಂಗಾರ ಅವರ ಕಾರು ಚಾಲಕನಾಗಿಯೂ ಸೇವೆ ಸಲ್ಲಿಸಿದ್ದಾರೆ. ಆರೆಸ್ಸೆಸ್ ನಾಯಕ ಮೈಚ ಜಯದೇವ ಅವರೊಂದಗೆ ದುಡಿದು ಅನುಭವ ಹೊಂದಿದವರು.

ಇತ್ತೀಚಿನ ಸುದ್ದಿ

ಜಾಹೀರಾತು