2:58 AM Tuesday13 - May 2025
ಬ್ರೇಕಿಂಗ್ ನ್ಯೂಸ್
Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌…

ಇತ್ತೀಚಿನ ಸುದ್ದಿ

ಸುಳ್ಯ: 6 ಬಾರಿ ಗೆದ್ದ ಅಂಗಾರ ಎಲೆಕ್ಷನ್ ಪಾಲಿಟಿಕ್ಸ್ ಗೆ ಗುಡ್ ಬೈ ಹೇಳುತ್ತಾರಾ? ಶಶಿ ಸುಳ್ಳಿ ನೂತನ ಅಭ್ಯರ್ಥಿಯೇ?

09/04/2023, 19:54

ಸುಳ್ಯ(reporterkarnataka.com): ಆರು ಬಾರಿ ಗೆದ್ದು 30 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಸಚಿವ ಅಂಗಾರ ಅವರಿಗೆ ಈ ಬಾರಿ ಕೊಕ್ ನೀಡುವ ಕುರಿತು ಬಿಜೆಪಿಯಲ್ಲಿ ತೀವ್ರ ಚಿಂತನೆ ನಡೆದಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ನಾಯಕರಾಗಿ ಸುಳ್ಯ ಬಿಜೆಪಿಯಿಂದ ಯಾರು ಮೂಡಿ ಬರಲಿದ್ದಾರೆ ಎಂಬ ಕೌತುಕ ಇಡೀ ಕರಾವಳಿಯಲ್ಲಿ ಆವರಿಸಿದೆ.
30 ವರ್ಷಗಳಿಂದ ಒಂದೇ ಪಕ್ಷವನ್ನು ಪ್ರತಿನಿಧಿಸಿ 6 ಬಾರಿ ಶಾಸಕರಾಗಿ, ಕೊನೆಗೂ ಸಚಿವರಾದ ಅಂಗಾರ ಅವರನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿಗೊಳಿಸಲು ಜಿಲ್ಲಾ ಹಾಗೂ ರಾಜ್ಯಮಟ್ಡದ ನಾಯಕರು ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹೊಸ ತಲೆಮಾರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪಕ್ಷ ಈ ಕುರಿತು ಚಿಂತನೆ ನಡೆಸಿದೆ ಎನ್ನಲಾಗಿದೆ. ಹಾಗಾದರೆ ಅಂಗಾರ ಅವರಿಗೆ ಪರ್ಯಾಯ ಅಭ್ಯರ್ಥಿ ಯಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಲಿದೆ? ಕಾಂಗ್ರೆಸ್ ತರಹ ಹೊರಗಿನಿಂದ ಅಭ್ಯರ್ಥಿಯನ್ನು ಆಮದು ಮಾಡಿಕೊಳ್ಳಲಿದೆಯೇ? ಅಲ್ಲ, ಸ್ಥಳೀಯ ಅಭ್ಯರ್ಥಿಯನ್ನೇ ಬೆಳೆಸಿ ನಾಯಕನಾಗಿ ಬೆಳೆಸಲಿದಯಾ ? ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ದೊರಕುತ್ತದೆ. ಅಕಸ್ಮಾತ್ ಅಂಗಾರ ಅವರ ಅಭ್ಯರ್ಥಿ ತನವನ್ನು ಬದಲಾಯಿಸಿದರೆ ಅವರ ಜಾಗಕ್ಕೆ ಸ್ಥಳೀಯ ವ್ಯಕ್ತಿಯನ್ನೇ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗುತ್ತದೆ. ಇಂತಹ ಅಭ್ಯರ್ಥಿ ಗಳಲ್ಲಿ ಪ್ರಮುಖ ಹೆಸರು ಶಶಿಧರ ಸುಳ್ಳಿ ಯಾನೆ ಶಶಿ ಸುಳ್ಳಿ.
ಆರೆಸ್ಸೆಸ್ ಗರಡಿಯಲ್ಲಿ ಪಳಗಿದ ಶಶಿ ಸುಳ್ಳಿ ಎಂಬ ತರುಣನನ್ನು ಮುನ್ನಲೆಗೆ ತರಲು ಆರೆಸ್ಸೆಸ್ ಎಲ್ಲ ಸಿದ್ದತೆ ನಡೆಸಿದೆ ಎನ್ನಲಾಗಿದೆ.
ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಸುಳ್ಳಿ ನಿವಾಸಿ ಶಶಿ ಸುಳ್ಳಿ ಪಿಯುಸಿ ಕಲಿತ ಆಟೋ ಚಾಲಕ. ರಾಷ್ಟ್ರೀಯ ಸ್ವಯಂಸೇವಕ ಸಂಘದ ನಿಷ್ಠಾವಂತ ಕಾರ್ಯಕರ್ತ. ಸಂಘದ ಒಟಿಸಿಯನ್ನು ಪೂರೈಸಿದವರು. ಶಾಸಕ ಅಂಗಾರ ಅವರ ಕಾರು ಚಾಲಕನಾಗಿಯೂ ಸೇವೆ ಸಲ್ಲಿಸಿದ್ದಾರೆ. ಆರೆಸ್ಸೆಸ್ ನಾಯಕ ಮೈಚ ಜಯದೇವ ಅವರೊಂದಗೆ ದುಡಿದು ಅನುಭವ ಹೊಂದಿದವರು.

ಇತ್ತೀಚಿನ ಸುದ್ದಿ

ಜಾಹೀರಾತು