5:29 PM Wednesday24 - September 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ, ಕುಶಾಲನಗರ ಮತ್ತು ಹುದಿಕೇರಿ ಆಸ್ಪತ್ರೆ ಮೇಲ್ದರ್ಜೆಗೆ: ಆರೋಗ್ಯ ಸಚಿವ… ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರ ಬದುಕು ಸುಧಾರಣೆ: ಮಹಿಳಾ ದಸರಾ ಉದ್ಘಾಟಿಸಿ… ಪೊನ್ನಂಪೇಟೆ ಕೋಣಗೇರಿಯಲ್ಲಿ ಸೈನಿಕ ಪತಿಯಿಂದಲೇ ಪತ್ನಿಗೆ ಗುಂಡು: ಮೈಸೂರಿಗೆ ರವಾನೆ ಗೋಣಿಕೊಪ್ಪಲು ಬಿಟ್ಟಂಗಾಲ ಮುಖ್ಯರಸ್ತೆಯಲ್ಲಿ ಖಾಸಗಿ ಬಸ್ – ಜೀಪು ಅಪಘಾತ: ಅದೃಷ್ಟವಶಾತ್ ಎಲ್ಲರೂ… Kodagu | ಐತಿಹಾಸಿಕ ಮಡಿಕೇರಿ ದಸರಾಕ್ಕೆ ಚಾಲನೆ: 4 ಶಕ್ತಿ ದೇವತೆಗಳಿಗೆ ವಿಶೇಷ… ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ

ಇತ್ತೀಚಿನ ಸುದ್ದಿ

ಸಿ ಫಾರ್ ಕಾಂಗ್ರೆಸ್ ಮಾತ್ರವಲ್ಲ; ಸಿ ಫಾರ್ ಕನ್‍ಫ್ಯೂಶನ್, ಕರಪ್ಶನ್: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಟೀಕೆ

10/04/2023, 23:18

ಮಂಗಳೂರು(reporterkarnataka.com): ಸಿ ಫಾರ್ ಕಾಂಗ್ರೆಸ್ ಮಾತ್ರವಲ್ಲ; ಸಿ ಫಾರ್ ಕನ್‍ಫ್ಯೂಶನ್ ಕೂಡ ಆಗುತ್ತದೆ. ಸಿ ಎಂದರೆ ಕರಪ್ಶನ್ ಎಂದೂ ಆಗುತ್ತದೆ. ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರದ ಜನನಿ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯ ಟೀಕಿಸಿದರು.
ಸೋಮವಾರ ಮಂಗಳೂರು ಮಾಧ್ಯಮ ಕೇಂದ್ರದ ಉದ್ಘಾಟನೆ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಸಮಗ್ರ ಅಭಿವೃದ್ಧಿಯ ಕನಸು ಕಂಡು ಅದನ್ನು ನನಸು ಮಾಡುವ ಸಾಮರ್ಥ್ಯ ಡಬಲ್ ಎಂಜಿನ್ ಸರಕಾರಕ್ಕೆ ಇದೆ. ಆದ್ದರಿಂದ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರಕಾರವನ್ನು ಜನತೆ ಚುನಾಯಿಸಬೇಕಿದೆ ಎಂದರು.
ಕರ್ನಾಟಕ ಮತ್ತು ಕನ್ನಡಿಗರಿಗೆ ಸಂಬಂಧಿಸಿ ದೂರದೃಷ್ಟಿಯ ಚಿಂತನೆ ಮತ್ತು ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮಗಳನ್ನು ನರೇಂದ್ರ ಮೋದಿಜಿ ಅವರು ಹೊಂದಿದ್ದಾರೆ ಎಂದು ತಿಳಿಸಿದರು.
ದೇಶದ ಅಭಿವೃದ್ಧಿಗೆ ರಾಜ್ಯದ ಕೊಡುಗೆ ದೊಡ್ಡದು ಎಂದ ಅವರು, ಡಬಲ್ ಎಂಜಿನ್ ಸರಕಾರವು ನಮ್ಮದಾದರೆ ಟ್ರಬಲ್ ಎಂಜಿನ್ ಸರಕಾರ ಕಾಂಗ್ರೆಸ್ ಪಕ್ಷದ್ದು ಎಂದು ಟೀಕಿಸಿದರು.
ನರೇಂದ್ರ ಮೋದಿಜಿ ಅವರು ದೂರದೃಷ್ಟಿಯ ನಾಯಕರಾಗಿದ್ದು, ವಿಶ್ವನಾಯಕರಾಗಿ ಹೊರಹೊಮ್ಮಿದ್ದಾರೆ. ಮೋದಿಜಿ ಅವರ ಅಭಿವೃದ್ಧಿಯ ಪರಿಕಲ್ಪನೆ ಮತ್ತು ದೂರದೃಷ್ಟಿಯ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಮರ್ಥವಾಗಿ ಅನುಷ್ಠಾನಕ್ಕೆ ತಂದಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ವಿರೋಧ ಪಕ್ಷದ ರಾಜ್ಯ ಸರಕಾರ ಇರುವ ಕಡೆಗಳಲ್ಲಿ ಕೇಂದ್ರದ ಯೋಜನೆಗಳಿಗೆ ಸರಿಯಾದ ಸಹಕಾರ ಸಿಗುತ್ತಿಲ್ಲ. ಚಿಲ್ಲರೆ ರಾಜಕಾರಣದಿಂದ ಅಭಿವೃದ್ಧಿಗೆ ಧಕ್ಕೆ ಆಗುತ್ತಿದೆ ಎಂದು ಅವರು ವಿಶ್ಲೇಷಿಸಿದರು. ಆದರೆ, ನಮ್ಮದೇ ಬಿಜೆಪಿ ಸರಕಾರ ರಾಜ್ಯದಲ್ಲೂ ಇದ್ದಾಗ ಸಬ್ ಕಾ ಸಾಥ್, ಸಬ್ ಕಾ ವಿಶ್ವಾಸ್ ಮಂತ್ರದ ಜೊತೆ ಅಭಿವೃದ್ಧಿ ಆಶಯ ಸಮರ್ಪಕವಾಗಿ ಜಾರಿಯಾಗುತ್ತದೆ. ಅದನ್ನೇ ಡಬಲ್ ಎಂಜಿನ್ ಸರಕಾರ ಎಂದು ಕರೆಯುವುದಾಗಿ ವಿವರಿಸಿದರು.
ಕರ್ನಾಟಕ ರಾಜ್ಯವು ಮೋದಿಜಿ ಅವರ ಮನಸ್ಸಿಗೆ ಹೆಚ್ಚು ಆಪ್ತವಾದ ರಾಜ್ಯವಾಗಿದೆ. ಅವರು ಕಾಂಗ್ರೆಸ್ ಸರಕಾರ ಇದ್ದಾಗ ಆಗುತ್ತಿದ್ದಂತೆ ಕೇವಲ ಸುಳ್ಳು ಆಶ್ವಾಸನೆ ನೀಡಲು ರಾಜ್ಯಕ್ಕೆ ಬಂದದ್ದಲ್ಲ. ಜನಹಿತದ ವಿವಿಧ ಯೋಜನೆಗಳ ಉದ್ಘಾಟನೆ ಮತ್ತು ಹಲವು ಯೋಜನೆಗಳ ಶಿಲಾನ್ಯಾಸಕ್ಕಾಗಿ ಮೋದಿಜಿ 8 ಬಾರಿ ಇಲ್ಲಿಗೆ ಬಂದಿದ್ದಾರೆ. ಅವರು ನುಡಿದಂತೆ ನಡೆದು ಯೋಜನೆಗಳ ಲೋಕಾರ್ಪಣೆಯನ್ನೂ ಮಾಡಿದ್ದನ್ನು ಜನತೆ ಅರಿತಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರಹಿತ ಮತ್ತು ಪ್ರಾದೇಶಿಕ ಹಿತವನ್ನು ಆದ್ಯತೆಯಿಂದ ನಾವು ನೋಡುತ್ತೇವೆ. ಸ್ವಹಿತಕ್ಕೆ ಕನಿಷ್ಠ ಸ್ಥಾನವನ್ನು ಬಿಜೆಪಿ ನೀಡುತ್ತದೆ. ಡಬಲ್ ಎಂಜಿನ್ ಸರಕಾರದಡಿ ರೈತರಿಗೆ 6 ಸಾವಿರ ರೂಪಾಯಿಯನ್ನು ಕೇಂದ್ರ ಮತ್ತು 4 ಸಾವಿರವನ್ನು ರಾಜ್ಯದ ಬಿಜೆಪಿ ಸರಕಾರ ನೀಡುತ್ತಿದೆ. ತುಷ್ಟೀಕರಣ ನೀತಿ ನಮ್ಮದಲ್ಲ. ಎಲ್ಲರ ಸಶಕ್ತೀಕರಣ ನೀತಿ ನಮ್ಮದು ಎಂದು ವಿವರಿಸಿದರು.

ಸ್ವಚ್ಛ ಭಾರತ ಯೋಜನೆಯಡಿ ರಾಜ್ಯದಲ್ಲಿ 48 ಲಕ್ಷ ಶೌಚಾಲಯ ನಿರ್ಮಿಸಿ ಮಹಿಳೆಯರ ಘನತೆಯನ್ನು ಹೆಚ್ಚಿಸಿದ್ದೇವೆ. 75 ವರ್ಷಗಳ ಸ್ವಾತಂತ್ರ್ಯದ ಬಳಿಕವೂ ಮನೆಗಳಿಗೆ ಕುಡಿಯುವ ನೀರನ್ನು ನೀಡಿರಲಿಲ್ಲ. ಜಲಜೀವನ್ ಮಿಷನ್ ಯೋಜನೆಯಡಿ ಸ್ವಚ್ಛ ಕುಡಿಯುವ ನೀರನ್ನು 1 ಕೋಟಿಗೂ ಹೆಚ್ಚು ಮನೆಗಳಿಗೆ ಕೊಡಲಾಗಿದೆ ಎಂದು ತಿಳಿಸಿದರು. 7 ಲಕ್ಷ ಮನೆಗಳ ನಿರ್ಮಾಣಕ್ಕೆ ಕ್ರಮ, 32 ಲಕ್ಷ ಸಿಲಿಂಡರ್ ಸಂಪರ್ಕ, ಆಯುಷ್ಮಾನ್ ಭಾರತ್ ಯೋಜನೆಯಡಿ 15 ಲಕ್ಷ ಜನರಿಗೆ ಚಿಕಿತ್ಸೆ- ಇವೆಲ್ಲವೂ ನಮ್ಮ ಸಾಧನೆಗಳು ಎಂದು ತಿಳಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಋಣಾತ್ಮಕ ಚಿಂತನೆ ಮತ್ತು ಟೀಕೆಗಳನ್ನು ಅವರು ಖಂಡಿಸಿದರು. ರಾಷ್ಟ್ರೀಯ ಭದ್ರತೆ, ಜನರ ಹಿತಾಸಕ್ತಿಗೆ ನಾವು ಆದ್ಯತೆ ನೀಡಿದ್ದೇವೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷವು ಪಿಎಫ್‍ಐ, ಎಸ್‍ಡಿಪಿಐ ಜೊತೆ ಸಂಪರ್ಕ ಹೊಂದಿತ್ತು. ಅದು ಗೆದ್ದಲು ಹುಳದಂತೆ ಎಂದ ಅವರು, ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಂಡ ಸಿದ್ದರಾಮಯ್ಯರವರು ಪಿಎಫ್‍ಐ, ಎಸ್‍ಡಿಪಿಐ ನಾಯಕರ ಹಾಗೂ ಕಾರ್ಯಕರ್ತರ ಮೇಲಿನ 1700 ಕೇಸುಗಳನ್ನು ರದ್ದುಪಡಿಸಿದ್ದರು ಎಂದು ಆಕ್ಷೇಪ ವ್ಯಕ್ತಪಡಿಸಿದರು.
ರಾಜ್ಯ ವಕ್ತಾರ ಮತ್ತು ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಮಾತನಾಡಿ, 6 ಬೇರೆ ಬೇರೆ ಭಾಗಗಳಲ್ಲಿ ವಿಭಾಗ ಮಾಧ್ಯಮ ಕೇಂದ್ರವನ್ನು ಆರಂಭಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳನ್ನು ಒಳಗೊಂಡು ಈ ವಿಭಾಗ ಮಾಧ್ಯಮ ಕೇಂದ್ರವನ್ನು ಸ್ಥಾಪಿಸಿದ್ದೇವೆ ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುದರ್ಶನ್ ಎಂ, ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ರತನ್ ರಮೇಶ್ ಪೂಜಾರಿ, ಜಿಲ್ಲಾ ಮುಖ್ಯ ವಕ್ತಾರ ರವಿಶಂಕರ್ ಮಿಜಾರ್ ಅವರು ಉದ್ಘಾಟನೆ ಮತ್ತು ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು