8:09 PM Saturday15 - November 2025
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ…

ಇತ್ತೀಚಿನ ಸುದ್ದಿ

ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಚುನಾವಣಾ ಕಚೇರಿ ನಾಳೆ ಉದ್ಘಾಟನೆ

11/04/2023, 15:57

ಬಂಟ್ವಾಳ(reporterkarnataka.com): ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಅವರ ಚುನಾವಣಾ ಕಚೇರಿ ಉದ್ಘಾಟನೆ
ಬುಧವಾರ(ಏ.12) ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಬಿ.ಸಿ. ರೋಡ್ ನ ಪದ್ಮ ಪೆಟ್ರೋಲ್ ಬಂಕ್ ಮುಂಭಾಗದಲ್ಲಿರುವ ಧನಲಕ್ಷ್ಮಿ ಕಾಂಪ್ಲೆಕ್ಸ್ ನಲ್ಲಿ ನೂತನ ಕಚೇರಿ ಉದ್ಘಾಟನೆಯಾಗಲಿದೆ.
ಕಾಂಗ್ರೆಸ್ ಪಕ್ಷವನ್ನು ಈ ಬಾರಿ ರಾಜ್ಯದಲ್ಲಿ ಅಧಿಕಾರಕ್ಕೆ ತರುವ ಉದ್ದೇಶದಿಂದ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲೂ ಭರದ ಚುನಾವಣಾ ಪ್ರಚಾರ ನಡೆಯುತ್ತಿದೆ. ಈ ಚುನಾವಣೆಯಲ್ಲಿ ಬಂಟ್ವಾಳದಲ್ಲಿ ಬಿ. ರಮಾನಾಥ ರೈಯವರನ್ನು ಭಾರೀ ಅಂತರದಲ್ಲಿ ಗೆಲ್ಲಿಸಲು ಕಾರ್ಯಕರ್ತರು ಅವಿರತ ಶ್ರಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯಗಳನ್ನು ನಿರ್ವಹಿಸಲು ಚುನಾವಣಾ ಕಚೇರಿ ತೆರೆಯಲಾಗುತ್ತಿದೆ.
ಬಂಟ್ವಾಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಿವಿಧ ಸಮುದಾಯಗಳ ಹಿರಿಯ ಮುಖಂಡರು ಕಚೇರಿ ಉದ್ಘಾಟಿಸಲಿದ್ದಾರೆ. ಅಭ್ಯರ್ಥಿ ಬಿ. ರಮಾನಾಥ ರೈ ಮತ್ತು ಪಕ್ಷದ ವರಿಷ್ಠರು, ಬ್ಲಾಕ್ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮತ್ತು ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಸಪಲ್ಯ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು