5:33 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ಅಖಂಡ ಏಕಾಹ ಭಜನಾ ಕಾರ್ಯಕ್ರಮ ಸಂಪನ್ನ

11/04/2023, 20:08

ಮಾಣಿ(reporterkarnataka.com): ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನ್ನಿದ್ಯ ದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನದ ಅಂಗವಾಗಿ ಅಖಂಡ- ಏಕಾಹ ಭಜನಾ ಕಾರ್ಯಕ್ರಮ ಎಪ್ರಿಲ್ 8 ನೇ ಸೂರ್ಯೋದಯದಿಂದ ಎಪ್ರಿಲ್ 9ರ ಸೂರ್ಯೋದಯದವರೆಗೆ ಊರ-ಪರವೂರ ವಿವಿಧ ಭಜನಾ ತಂಡಗಳ ಸಮ್ಮಿಲನ ದಲ್ಲಿ ಅದ್ದೂರಿಯಾಗಿ ಜರುಗಿತು.
ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನಗೊಳಿಸುವ ಮೂಲಕ ಈ ಅಖಂಡ ಏಕಾಹ ಭಜನಾ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ರೈ ಪೆರ್ಲಬೀಡು, ಪ್ರಮುಖರಾದ ಎನ್ .ರವಿಶರ್ಮ, ಸದಾಶಿವ ಆಚಾರ್ಯ, ವೈದಿಕರಾದ ಪಳನೀರು ಅನಂತ ಭಟ್ ಗೂ ಕ್ಷೇತ್ರ ಅಭಿವೃದ್ಧಿ ಸಮಿತಿಯ ಸದಸ್ಯರು, ಮಹಿಳಾ ಸಮಿತಿ ಸದಸ್ಯರು, ಗ್ರಾಮಸ್ತರು ಹಾಗೂ ಊರ – ಪರವೂರಿನ ಭಕ್ತರು ಉಪಸ್ಥಿತರಿದ್ದರು.
ದೇವಾಲಯ ಜೀರ್ಣೋದ್ಧಾರ ಕುರಿತಾಗಿ ಜರುಗಿದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಪರಿಹಾರ ಹಾಗೂ ನಿವೃತ್ತಿಯ ಭಾಗವಾಗಿ ಗ್ರಾಮದ ಸುಬೀಕ್ಷೇಗಾಗಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಖಂಡ ಏಕಾಹ ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದು 20ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಈ ಕಾರ್ಯಕ್ರಮ ಕ್ಕೆ ಚಿತೈಸಿ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ನೂಜಿಬೈಲು ರಮೇಶ್ ಭಟ್, ವೇದ ವಿದ್ವಾಂಸರಾದ ವೇ| ಮೂ| ಪಳ್ಳತ್ತಡ್ಕ ಘನಪಾಠಿ ಶಂಕರನಾರಾಯಣ ಭಟ್, ರಾಕೋಡಿ ಈಶ್ವರ ಭಟ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸೇರಿದಂತೆ ಹಲವು ಮಂದಿ ಪ್ರಮುಖರು ಪಾಲ್ಗೊಂಡಿದ್ದರು.
ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಯವರು ಹಾಗೂ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಶುಭಾರಂಭಗೊಂಡ ಬಾನೊಟ್ಟು ಅಖಂಡ ಏಕಾಹ ಭಜನೆ ನೇರಳಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ರ ಭಜನೆಯ ಮೂಲಕ ಮಂಗಳಾಚರಣೆ ಕಾಣುವ ಮೂಲಕ ಬಾನೊಟ್ಟು ಅಖಂಡ ಏಕಾಹ ಭಜನೆ ಸಂಪನ್ನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು