1:33 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ಅಖಂಡ ಏಕಾಹ ಭಜನಾ ಕಾರ್ಯಕ್ರಮ ಸಂಪನ್ನ

11/04/2023, 20:08

ಮಾಣಿ(reporterkarnataka.com): ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನ್ನಿದ್ಯ ದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನದ ಅಂಗವಾಗಿ ಅಖಂಡ- ಏಕಾಹ ಭಜನಾ ಕಾರ್ಯಕ್ರಮ ಎಪ್ರಿಲ್ 8 ನೇ ಸೂರ್ಯೋದಯದಿಂದ ಎಪ್ರಿಲ್ 9ರ ಸೂರ್ಯೋದಯದವರೆಗೆ ಊರ-ಪರವೂರ ವಿವಿಧ ಭಜನಾ ತಂಡಗಳ ಸಮ್ಮಿಲನ ದಲ್ಲಿ ಅದ್ದೂರಿಯಾಗಿ ಜರುಗಿತು.
ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನಗೊಳಿಸುವ ಮೂಲಕ ಈ ಅಖಂಡ ಏಕಾಹ ಭಜನಾ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ರೈ ಪೆರ್ಲಬೀಡು, ಪ್ರಮುಖರಾದ ಎನ್ .ರವಿಶರ್ಮ, ಸದಾಶಿವ ಆಚಾರ್ಯ, ವೈದಿಕರಾದ ಪಳನೀರು ಅನಂತ ಭಟ್ ಗೂ ಕ್ಷೇತ್ರ ಅಭಿವೃದ್ಧಿ ಸಮಿತಿಯ ಸದಸ್ಯರು, ಮಹಿಳಾ ಸಮಿತಿ ಸದಸ್ಯರು, ಗ್ರಾಮಸ್ತರು ಹಾಗೂ ಊರ – ಪರವೂರಿನ ಭಕ್ತರು ಉಪಸ್ಥಿತರಿದ್ದರು.
ದೇವಾಲಯ ಜೀರ್ಣೋದ್ಧಾರ ಕುರಿತಾಗಿ ಜರುಗಿದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಪರಿಹಾರ ಹಾಗೂ ನಿವೃತ್ತಿಯ ಭಾಗವಾಗಿ ಗ್ರಾಮದ ಸುಬೀಕ್ಷೇಗಾಗಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಖಂಡ ಏಕಾಹ ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದು 20ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಈ ಕಾರ್ಯಕ್ರಮ ಕ್ಕೆ ಚಿತೈಸಿ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ನೂಜಿಬೈಲು ರಮೇಶ್ ಭಟ್, ವೇದ ವಿದ್ವಾಂಸರಾದ ವೇ| ಮೂ| ಪಳ್ಳತ್ತಡ್ಕ ಘನಪಾಠಿ ಶಂಕರನಾರಾಯಣ ಭಟ್, ರಾಕೋಡಿ ಈಶ್ವರ ಭಟ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸೇರಿದಂತೆ ಹಲವು ಮಂದಿ ಪ್ರಮುಖರು ಪಾಲ್ಗೊಂಡಿದ್ದರು.
ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಯವರು ಹಾಗೂ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಶುಭಾರಂಭಗೊಂಡ ಬಾನೊಟ್ಟು ಅಖಂಡ ಏಕಾಹ ಭಜನೆ ನೇರಳಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ರ ಭಜನೆಯ ಮೂಲಕ ಮಂಗಳಾಚರಣೆ ಕಾಣುವ ಮೂಲಕ ಬಾನೊಟ್ಟು ಅಖಂಡ ಏಕಾಹ ಭಜನೆ ಸಂಪನ್ನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು