10:27 PM Wednesday12 - March 2025
ಬ್ರೇಕಿಂಗ್ ನ್ಯೂಸ್
ಮಹಿಳಾ ಸಬಲೀಕರಣಕ್ಕೆ ಹಲವು ಯೋಜನೆಗಳ ಅನುಷ್ಠಾನ: ವಿಧಾನಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಬಿಟ್ಟು ಹೋದ ತಂದೆ!!: ಹಠಕ್ಕೆ ಬಿದ್ದು ‘ಕಿಕ್ ಬಾಕ್ಸರ್’ ಆದ… Budget Session | ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ವಿಧಾನ ಪರಿಷತ್ ನಲ್ಲಿ… KPSC ಪರೀಕ್ಷೆಯಲ್ಲಿ ಲೋಪ; ಉಪ್ಪು ತಿಂದವರು ನೀರು ಕಡಿಯಲೇಬೇಕು: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ Central v/s State | ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನಿಲುವು: ಸಿಎಂ… Education | ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಗುರಿ: ಸಚಿವ ಡಾ.ಎಂ.ಸಿ… ಗ್ಯಾರಂಟಿ ಅನುಷ್ಠಾನ ಸಮಿತಿ ರಚನೆಗೆ ಬಿಜೆಪಿ ವಿರೋಧ; ಇದು ಸಂವಿಧಾನ ವಿರೋಧಿ: ಪ್ರತಿಪಕ್ಷ… Global warming | ಹೆಚ್ಚುತ್ತಿರುವ ತಾಪಮಾನ: ಮೈಸೂರು ಝೂ ಪ್ರಾಣಿಗಳಿಗೆ ವಾಟರ್ ಜೆಟ್,… ರಂಜಾನ್ ಮಾಸ: ಸಮೋಸಕ್ಕೆ ಭಾರೀ ಡಿಮಾಂಡ್; ಪ್ರತಿದಿನ 15 ಸಾವಿರಕ್ಕೂ ಹೆಚ್ಚು ಮಾರಾಟ ರೈತರ ಐಪಿ ಸೆಟ್‌ಗಳಿಗೆ ಹೆಚ್ಚುವರಿ 2 ತಾಸು ವಿದ್ಯುತ್‌ ಪೂರೈಕೆ ಬಗ್ಗೆ ಸರಕಾರ…

ಇತ್ತೀಚಿನ ಸುದ್ದಿ

ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ಅಖಂಡ ಏಕಾಹ ಭಜನಾ ಕಾರ್ಯಕ್ರಮ ಸಂಪನ್ನ

11/04/2023, 20:08

ಮಾಣಿ(reporterkarnataka.com): ಬಾನೊಟ್ಟು ಶ್ರೀ ಉಮಾಮಹೇಶ್ವರ ಸಾನ್ನಿದ್ಯ ದ ಜೀರ್ಣೋದ್ಧಾರ ಕುರಿತು ಧರ್ಮಜಾಗೃತಿ ಅಭಿಯಾನದ ಅಂಗವಾಗಿ ಅಖಂಡ- ಏಕಾಹ ಭಜನಾ ಕಾರ್ಯಕ್ರಮ ಎಪ್ರಿಲ್ 8 ನೇ ಸೂರ್ಯೋದಯದಿಂದ ಎಪ್ರಿಲ್ 9ರ ಸೂರ್ಯೋದಯದವರೆಗೆ ಊರ-ಪರವೂರ ವಿವಿಧ ಭಜನಾ ತಂಡಗಳ ಸಮ್ಮಿಲನ ದಲ್ಲಿ ಅದ್ದೂರಿಯಾಗಿ ಜರುಗಿತು.
ಶ್ರೀಧಾಮ ಮಾಣಿಲದ ಮೋಹನದಾಸ ಪರಮಹಂಸ ಸ್ವಾಮೀಜಿಯವರು ದೀಪ ಪ್ರಜ್ವಲನಗೊಳಿಸುವ ಮೂಲಕ ಈ ಅಖಂಡ ಏಕಾಹ ಭಜನಾ ಕಾರ್ಯಕ್ರಮಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ರೈ ಪೆರ್ಲಬೀಡು, ಪ್ರಮುಖರಾದ ಎನ್ .ರವಿಶರ್ಮ, ಸದಾಶಿವ ಆಚಾರ್ಯ, ವೈದಿಕರಾದ ಪಳನೀರು ಅನಂತ ಭಟ್ ಗೂ ಕ್ಷೇತ್ರ ಅಭಿವೃದ್ಧಿ ಸಮಿತಿಯ ಸದಸ್ಯರು, ಮಹಿಳಾ ಸಮಿತಿ ಸದಸ್ಯರು, ಗ್ರಾಮಸ್ತರು ಹಾಗೂ ಊರ – ಪರವೂರಿನ ಭಕ್ತರು ಉಪಸ್ಥಿತರಿದ್ದರು.
ದೇವಾಲಯ ಜೀರ್ಣೋದ್ಧಾರ ಕುರಿತಾಗಿ ಜರುಗಿದ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಪರಿಹಾರ ಹಾಗೂ ನಿವೃತ್ತಿಯ ಭಾಗವಾಗಿ ಗ್ರಾಮದ ಸುಬೀಕ್ಷೇಗಾಗಿ ಕ್ಷೇತ್ರ ಅಭಿವೃದ್ಧಿ ಸಮಿತಿ ಅಖಂಡ ಏಕಾಹ ಭಜನೆ ಹಾಗೂ ಇತರ ಧಾರ್ಮಿಕ ಕಾರ್ಯಕ್ರಮ ಆಯೋಜಿಸಿದ್ದು 20ಕ್ಕೂ ಹೆಚ್ಚು ವಿವಿಧ ಭಜನಾ ತಂಡಗಳು ಭಾಗವಹಿಸಿದ್ದವು. ಶ್ರೀ ಗುರುದೇವದತ್ತ ಸಂಸ್ಥಾನ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಈ ಕಾರ್ಯಕ್ರಮ ಕ್ಕೆ ಚಿತೈಸಿ ಶುಭಹಾರೈಸಿದರು.


ಕಾರ್ಯಕ್ರಮದಲ್ಲಿ ನೂಜಿಬೈಲು ರಮೇಶ್ ಭಟ್, ವೇದ ವಿದ್ವಾಂಸರಾದ ವೇ| ಮೂ| ಪಳ್ಳತ್ತಡ್ಕ ಘನಪಾಠಿ ಶಂಕರನಾರಾಯಣ ಭಟ್, ರಾಕೋಡಿ ಈಶ್ವರ ಭಟ್,ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ,ಸೇರಿದಂತೆ ಹಲವು ಮಂದಿ ಪ್ರಮುಖರು ಪಾಲ್ಗೊಂಡಿದ್ದರು.
ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಯವರು ಹಾಗೂ ರಾಜರಾಜೇಶ್ವರಿ ಭಜನಾ ಮಂಡಳಿಯ ಸದಸ್ಯರಿಂದ ಶುಭಾರಂಭಗೊಂಡ ಬಾನೊಟ್ಟು ಅಖಂಡ ಏಕಾಹ ಭಜನೆ ನೇರಳಕಟ್ಟೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ರ ಭಜನೆಯ ಮೂಲಕ ಮಂಗಳಾಚರಣೆ ಕಾಣುವ ಮೂಲಕ ಬಾನೊಟ್ಟು ಅಖಂಡ ಏಕಾಹ ಭಜನೆ ಸಂಪನ್ನ ಗೊಂಡಿತು.

ಇತ್ತೀಚಿನ ಸುದ್ದಿ

ಜಾಹೀರಾತು