8:36 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಬೈಂದೂರು ಸುಕುಮಾರ್ ಶೆಟ್ಡಿ, ಮೂಡಿಗೆರೆ ಕುಮಾರಸ್ವಾಮಿ ಸಹಿತ 7 ಮಂದಿ ಹಾಲಿಗಳಿಗೆ ಟಿಕೆಟ್ ಮಿಸ್

13/04/2023, 00:31

ಹೊಸದಿಲ್ಲಿ(reporterkarnataka.com): ಕರ್ನಾಟಕ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ 2ನೇ ಪಟ್ಟಿಯನ್ನು ಬುಧವಾರ ಬಿಡುಗಡೆಗೊಳಿಸಿದೆ. ಬೈಂದೂರಿನ ಹಾಲಿ ಶಾಸಕ ಸುಕುಮಾರ ಶೆಟ್ಡಿ, ಮೂಡಿಗೆರೆಯ ಎಂ.ಪಿ. ಕುಮಾರಸ್ವಾಮಿ ಸಹಿತ 7 ಮಂದಿಗೆ ಟಿಕೆಟ್ ಮಿಸ್ ಆಗಿದೆ.
ಬಿಜೆಪಿ ಹೈಕಮಾಂಡ್ ಮಂಗಳವಾರ ರಾತ್ರಿ 189 ಮಂದಿಯ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಅದ ಬೆನ್ನಲ್ಲೆ ಬುಧವಾರ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಬೈಂದೂರು ಕ್ಷೇತ್ರಕ್ಕೆ ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ. ಹೊಸ ಮುಖ ಗುರುರಾಜ ಗಂಟಿಗೊಳಿ ಅವರಿಗೆ ಟಿಕೆಟ್ ನೀಡಲಾಗಿದೆ. ಮೂಡಿಗೆರೆಯ ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಹುಬ್ಬಳ್ಳಿ ಸೆಂಟ್ರಲ್ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಇಡಲಾಗಿದೆ. ಇನ್ನೂ 12 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಬಾಕಿ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು