10:14 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ರಾಜಧರ್ಮ ರಾಜಕಾರಣ ಮೂಲಕ ಜನಪರ ಆಡಳಿತ ನೀಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್

13/04/2023, 00:38

ಬಂಟ್ವಾಳ(reporterksrnataka.com):
ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆಯಾಗಲು ಕಾರಣರಾದ ಕ್ಷೇತ್ರದ ಜನತೆಗೆ ಧನ್ಯವಾದ ನೀಡಿ , ಮುಂದಿನ ಅವಧಿಯಲ್ಲಿ ಬಿಜೆಪಿಯ ಶಾಸಕರೇ ಆಯ್ಕೆಯಾಗುವ ದೃಷ್ಟಿಯಿಂದ ಹಿರಿಯರ ಮತದಾರರ, ಕಾರ್ಯಕರ್ತರ ಆಶೀರ್ವಾದ ಪಡೆಯಲು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನೀವು ನನ್ನ ಜೊತೆಯಾಗಿ ನಿಂತು ಬೆಂಬಲ ನೀಡಿದರೆ ಅದುವೇ ದೊಡ್ಡ ಶಕ್ತಿ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಕೊಳ್ನಾಡು‌ ಶಕ್ತಿ ಕೇಂದ್ರದ ಮುಂಡಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಜಧರ್ಮದ ರಾಜಕಾರಣದ ಮೂಲಕ ಕ್ಷೇತ್ರದಲ್ಲಿ ಸರ್ವರಿಗೂ ಸಮಾನವಾದ ರೀತಿಯ ಜನಪರವಾದ ಆಡಳಿತವನ್ನು ಮಾಡಿದ್ದೇನೆ, ನನ್ನ ಅಧಿಕಾರಕ್ಕೆ ಕ್ಷೇತ್ರದ ಜನತೆ ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಜಿ.ಪಂ.ನಿಕಟಪೂರ್ವ ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ಮಾದವ ಮಾವೆ, ಜಯರಾಮ ಕುಟ್ರಕಲ , ಪುಷ್ಪರಾಜ ಚೌಟ, ಪ್ರಕಾಶ್ ಅಂಚನ್, ಅಭಿಷೇಕ್ ರೈ,ವಿಶ್ವನಾಥ ಪೂಜಾರಿ ಕೋಡಿ, ಗ್ರಾಪಂ ಸದಸ್ಯರಾದ ರಾಜಾರಾಂ ಹೆಗ್ಡೆ ಕುದ್ರಿಯಾ, ಹರೀಶ್ ಕುಡ್ತಮುಗೇರು,ಪ್ರಶಾಂತ್ ಶೆಟ್ಟಿ, ಲೋಹಿತ್ ಕೆಳಗಿನ ಅಗರಿ, ಕೃಷ್ಣಪ್ಪ ಪೂಜಾರಿ ಕುಡ್ತಮುಗೇರು, ಸೌಮ್ಯಲತಾ ಕಾಡುಮಠ, ಅನಿತಾ ಶೆಟ್ಟಿಗಾರ್, ಕಿಶೋರ್ ದೇವಾಡಿಗ, ಶಶಿಕಲಾ ಕುದ್ರಿಯಾ, ಪ್ರಮುಖರಾದ ನಾರಾಯಣ ಶೆಟ್ಟಿ ಕುಲ್ಯಾರು, ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಸೇರ್ಪಡೆ: ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಜಗದೀಶ್ ರೈ, ಗ್ರಾಪಂ ಸದಸ್ಯೆ ವಸಂತಿ , ಕಾರ್ಯಕರ್ತೆ ಮೋಹಿನಿ ಕಾಡುಮಠ ಅವರು ಬಿಜೆಪಿ ಪಕ್ಷದ ಸಿದ್ದಾಂತ ಹಾಗೂ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಶಾಸಕ ರಾಜೇಶ್ ನಾಯ್ಕ್ ಅವರು ಬಿಜೆಪಿಯ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು