2:53 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ರಾಜಧರ್ಮ ರಾಜಕಾರಣ ಮೂಲಕ ಜನಪರ ಆಡಳಿತ ನೀಡಿದ್ದೇನೆ: ಶಾಸಕ ರಾಜೇಶ್ ನಾಯ್ಕ್

13/04/2023, 00:38

ಬಂಟ್ವಾಳ(reporterksrnataka.com):
ಐದು ವರ್ಷಗಳ ಕಾಲ ಶಾಸಕನಾಗಿ ಆಯ್ಕೆಯಾಗಲು ಕಾರಣರಾದ ಕ್ಷೇತ್ರದ ಜನತೆಗೆ ಧನ್ಯವಾದ ನೀಡಿ , ಮುಂದಿನ ಅವಧಿಯಲ್ಲಿ ಬಿಜೆಪಿಯ ಶಾಸಕರೇ ಆಯ್ಕೆಯಾಗುವ ದೃಷ್ಟಿಯಿಂದ ಹಿರಿಯರ ಮತದಾರರ, ಕಾರ್ಯಕರ್ತರ ಆಶೀರ್ವಾದ ಪಡೆಯಲು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ನೀವು ನನ್ನ ಜೊತೆಯಾಗಿ ನಿಂತು ಬೆಂಬಲ ನೀಡಿದರೆ ಅದುವೇ ದೊಡ್ಡ ಶಕ್ತಿ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.
ಕೊಳ್ನಾಡು‌ ಶಕ್ತಿ ಕೇಂದ್ರದ ಮುಂಡಪ್ಪ ಪೂಜಾರಿ ಅವರ ಮನೆಯಲ್ಲಿ ನಡೆದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ರಾಜಧರ್ಮದ ರಾಜಕಾರಣದ ಮೂಲಕ ಕ್ಷೇತ್ರದಲ್ಲಿ ಸರ್ವರಿಗೂ ಸಮಾನವಾದ ರೀತಿಯ ಜನಪರವಾದ ಆಡಳಿತವನ್ನು ಮಾಡಿದ್ದೇನೆ, ನನ್ನ ಅಧಿಕಾರಕ್ಕೆ ಕ್ಷೇತ್ರದ ಜನತೆ ಹಾಗೂ ಅಧಿಕಾರಿಗಳು ಸಹಕಾರ ನೀಡಿದ್ದಾರೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ರವೀಶ್ ಶೆಟ್ಟಿ ಕರ್ಕಳ, ಜಿ.ಪಂ.ನಿಕಟಪೂರ್ವ ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಪ್ರಮುಖರಾದ ಮಾದವ ಮಾವೆ, ಜಯರಾಮ ಕುಟ್ರಕಲ , ಪುಷ್ಪರಾಜ ಚೌಟ, ಪ್ರಕಾಶ್ ಅಂಚನ್, ಅಭಿಷೇಕ್ ರೈ,ವಿಶ್ವನಾಥ ಪೂಜಾರಿ ಕೋಡಿ, ಗ್ರಾಪಂ ಸದಸ್ಯರಾದ ರಾಜಾರಾಂ ಹೆಗ್ಡೆ ಕುದ್ರಿಯಾ, ಹರೀಶ್ ಕುಡ್ತಮುಗೇರು,ಪ್ರಶಾಂತ್ ಶೆಟ್ಟಿ, ಲೋಹಿತ್ ಕೆಳಗಿನ ಅಗರಿ, ಕೃಷ್ಣಪ್ಪ ಪೂಜಾರಿ ಕುಡ್ತಮುಗೇರು, ಸೌಮ್ಯಲತಾ ಕಾಡುಮಠ, ಅನಿತಾ ಶೆಟ್ಟಿಗಾರ್, ಕಿಶೋರ್ ದೇವಾಡಿಗ, ಶಶಿಕಲಾ ಕುದ್ರಿಯಾ, ಪ್ರಮುಖರಾದ ನಾರಾಯಣ ಶೆಟ್ಟಿ ಕುಲ್ಯಾರು, ಮತ್ತಿತರರು ಉಪಸ್ಥಿತರಿದ್ದರು.

ಬಿಜೆಪಿ ಸೇರ್ಪಡೆ: ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಜಗದೀಶ್ ರೈ, ಗ್ರಾಪಂ ಸದಸ್ಯೆ ವಸಂತಿ , ಕಾರ್ಯಕರ್ತೆ ಮೋಹಿನಿ ಕಾಡುಮಠ ಅವರು ಬಿಜೆಪಿ ಪಕ್ಷದ ಸಿದ್ದಾಂತ ಹಾಗೂ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಶಾಸಕ ರಾಜೇಶ್ ನಾಯ್ಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.
ಶಾಸಕ ರಾಜೇಶ್ ನಾಯ್ಕ್ ಅವರು ಬಿಜೆಪಿಯ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು