6:06 PM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಕಾಂಗ್ರೆಸ್ 3ನೇ ಪಟ್ಟಿ: ನಿನ್ನೆ ಕೈ ಹಿಡಿದ ಸವದಿಗೆ ಇಂದು ಅಥಣಿ ಟಿಕೆಟ್!; ಮಂಗಳೂರು ದಕ್ಷಿಣದಿಂದ ಕೊನೆಗೂ ಜೆ.ಆರ್. ಲೋಬೊ, ಪುತ್ತೂರಿನಿಂದ ರೈಗೆ ಅವಕಾಶ

15/04/2023, 15:35

ನವದೆಹಲಿ(reporterkarnataka.com): ರಾಜ್ಯ ವಿಧಾನ ಸಭೆ ಚುನಾವಣೆಗೆ ಸಂಬಂಧಿಸಿದ್ದಂತೆ
ಕಾಂಗ್ರೆಸ್ ಪಕ್ಷದ 3ನೇ ಪಟ್ಟಿ ಬಿಡುಗಡೆಯಾಗಿದ್ದು, ಮಂಗಳೂರು ದಕ್ಷಿಣದಿಂದ ಜೆ. ಆರ್. ಲೋಬೊ ಹಾಗೂ ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ. ಮಂಗಳೂರು ಉತ್ತರಕ್ಕೆ ಇನ್ನೂ ನಿರ್ಧಾರವಾಗಿಲ್ಲ.
ಒಟ್ಟು 43 ಮಂದಿಯ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿದೆ. ನಿನ್ನೆ ಕಾಂಗ್ರೆಸ್ ಸೇರಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಅಥಣಿ ಕ್ಷೇತ್ರದಿಂದ ಇಂದು ನಿರಾಯಸವಾಗಿ ಟಿಕೆಟ್ ಲಭಿಸಿದೆ. ಹಾಗೆ ಪುತ್ತೂರು ಕ್ಷೇತ್ರದಿಂದ ಇತ್ತೀಚೆಗಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ಲಭಿಸಿದೆ. ಇಲ್ಲಿ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ಕುಮಾರ್ ರೈ ಅವರ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆದಿತ್ತು. ಕೋಲಾರದಿಂದ ಕೊತ್ತೂರು ಮಂಜುನಾಥಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಅಲ್ಲಿಂದ ಟಿಕೆಟ್ ದೊರೆತಿಲ್ಲ. ಚಿತ್ರನಟಿ ಉಮಾಶ್ರೀ ಅವರಿಗೆ
ತೆರೆದಾಳದಿಂದ ಈ ಬಾರಿ ಟಿಕೆಟ್ ಸಿಕ್ಕಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು