7:39 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಉಂಟಾದ ಬಿರುಗಾಳಿ ಇದೀಗ ಜೆಡಿಎಸ್ ನಲ್ಲಿ!; ಬಿ.ಬಿ. ನಿಂಗಯ್ಯ- ಕುಮಾರಸ್ವಾಮಿ ನಡುವೆ ಟಿಕೆಟ್ ಗೆ ಗುದ್ದಾಟ!!

15/04/2023, 17:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಎದ್ದ ಬಿರುಗಾಳಿ ಈಗ ಜನತಾ ದಳದಲ್ಲಿಯೂ ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ವಂಚಿತ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿ ತೊರೆದು ಜನತಾ ದಳ ಸೇರಿದ್ದಾರೆ. ದಳ ಟಿಕೆಟ್ ಕುಮಾರಸ್ವಾಮಿ ಪಾಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ನಡುವೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಎಚ್ಚೆತ್ತುಕೊಂಡಿದ್ದಾರೆ. ಇಬ್ಬರ ನಡುವೆ ಟಿಕೆಟ್ ಗೆ ಗುದ್ದಾಟ ಶುರುವಾಗಿದೆ.
ಎಂ.ಪಿ. ಕುಮಾರಸ್ವಾಮಿ ಅವರು ದಳ ಅಂಗಳಕ್ಕೆ ಜಿಗಿದ ಬೆನ್ನಲ್ಲೇ ನಿಂಗಯ್ಯ ಅವರು ಅಲರ್ಟ್ ಆಗಿದ್ದಾರೆ. ಮಾಧ್ಯಮ ಜತೆ ಶನಿವಾರ ಮಾತನಾಡಿದ ಅವರು, ಮೂಡಿಗೆರೆಯಲ್ಲಿ ಯಶಸ್ವಿಯಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಕಟಿಸಿದ 93 ಜನರ ಪಟ್ಟಿಯಲ್ಲಿ ನನ್ನ ಹೆಸರಿತ್ತು.
ನನಗೆ ಬಿ ಫಾರಂ ನೀಡುತ್ತಾರೆಂದು ನನಗೆ ನಂಬಿಕೆ ಇದೆ. ಬಿಜೆಪಿಯ ಕುಮಾರಸ್ವಾಮಿ ಜೆಡಿಎಸ್ ಬಂದಿದ್ದಾರೆ. ಅವರಿಗೆ ಸ್ವಾಗತ. ಕುಮಾರಸ್ವಾಮಿ ಮೊದಲು ಜೆಡಿಎಸ್ ಪಕ್ಷದಲ್ಲಿ ದುಡಿಯಲಿ. ಇಡೀ ಮೂಡಿಗೆರೆ ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯವೂ ಅದೇ ಆಗಿದೆ. ನಿನ್ನೆಯಷ್ಟೆ ಬಂದಿದ್ದಾರೆ, ಅವರು ಮೊದಲು ಪಕ್ಷದ ಸಿದ್ದಾಂತವನ್ನ ತಿಳಿದುಕೊಳ್ಳಲಿ ಎಂದರು.
ಪಕ್ಷಕ್ಕೆ ಬಂದ ಕೂಡಲೇ ಮಣೆ ಹಾಕುವುದು ಸೂಕ್ತವಲ್ಲ. ಜೆಡಿಎಸ್ ಬಿ ಫಾರಂ ನನಗೇ ನೀಡಬೇಕು. ಈಗಾಗಲೇ ಕಷ್ಟಪಟ್ಟ ಕೊಟ್ಯಂತರ ರೂಪಾಯಿ ಖರ್ಚು ಮಾಡಿದ್ದೇನೆ. ನನಗೇ ಬಿ ಫಾರಂ ನೀಡಬೇಕೆಂದು ಮನವಿ ಮಾಡಿದರು.

ಈಗ ಕುಮಾರಸ್ವಾಮಿಗೆ ಟಿಕೆಟ್ ಎಂಬ ಮಾತುಗಳು ಕೇಳಿ ಬರುತ್ತಿದೆ. ಹಾಗಾಗುವುದಿಲ್ಲ ಎಂದು ಭಾವಿಸಿದ್ದೇನೆ, ಎಚ್. ಡಿ. ಕುಮಾರಸ್ವಾಮಿ ನನಗೆ ಬಿ ಫಾರಂ ನೀಡುತ್ತಾರೆ. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ, ನಾನು ಗೆಲ್ಲುತ್ತೇನೆ, ನನಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು