2:34 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಉಂಟಾದ ಬಿರುಗಾಳಿ ಇದೀಗ ಜೆಡಿಎಸ್ ನಲ್ಲಿ!; ಬಿ.ಬಿ. ನಿಂಗಯ್ಯ- ಕುಮಾರಸ್ವಾಮಿ ನಡುವೆ ಟಿಕೆಟ್ ಗೆ ಗುದ್ದಾಟ!!

15/04/2023, 17:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಎದ್ದ ಬಿರುಗಾಳಿ ಈಗ ಜನತಾ ದಳದಲ್ಲಿಯೂ ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ವಂಚಿತ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿ ತೊರೆದು ಜನತಾ ದಳ ಸೇರಿದ್ದಾರೆ. ದಳ ಟಿಕೆಟ್ ಕುಮಾರಸ್ವಾಮಿ ಪಾಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ನಡುವೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಎಚ್ಚೆತ್ತುಕೊಂಡಿದ್ದಾರೆ. ಇಬ್ಬರ ನಡುವೆ ಟಿಕೆಟ್ ಗೆ ಗುದ್ದಾಟ ಶುರುವಾಗಿದೆ.
ಎಂ.ಪಿ. ಕುಮಾರಸ್ವಾಮಿ ಅವರು ದಳ ಅಂಗಳಕ್ಕೆ ಜಿಗಿದ ಬೆನ್ನಲ್ಲೇ ನಿಂಗಯ್ಯ ಅವರು ಅಲರ್ಟ್ ಆಗಿದ್ದಾರೆ. ಮಾಧ್ಯಮ ಜತೆ ಶನಿವಾರ ಮಾತನಾಡಿದ ಅವರು, ಮೂಡಿಗೆರೆಯಲ್ಲಿ ಯಶಸ್ವಿಯಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಕಟಿಸಿದ 93 ಜನರ ಪಟ್ಟಿಯಲ್ಲಿ ನನ್ನ ಹೆಸರಿತ್ತು.
ನನಗೆ ಬಿ ಫಾರಂ ನೀಡುತ್ತಾರೆಂದು ನನಗೆ ನಂಬಿಕೆ ಇದೆ. ಬಿಜೆಪಿಯ ಕುಮಾರಸ್ವಾಮಿ ಜೆಡಿಎಸ್ ಬಂದಿದ್ದಾರೆ. ಅವರಿಗೆ ಸ್ವಾಗತ. ಕುಮಾರಸ್ವಾಮಿ ಮೊದಲು ಜೆಡಿಎಸ್ ಪಕ್ಷದಲ್ಲಿ ದುಡಿಯಲಿ. ಇಡೀ ಮೂಡಿಗೆರೆ ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯವೂ ಅದೇ ಆಗಿದೆ. ನಿನ್ನೆಯಷ್ಟೆ ಬಂದಿದ್ದಾರೆ, ಅವರು ಮೊದಲು ಪಕ್ಷದ ಸಿದ್ದಾಂತವನ್ನ ತಿಳಿದುಕೊಳ್ಳಲಿ ಎಂದರು.
ಪಕ್ಷಕ್ಕೆ ಬಂದ ಕೂಡಲೇ ಮಣೆ ಹಾಕುವುದು ಸೂಕ್ತವಲ್ಲ. ಜೆಡಿಎಸ್ ಬಿ ಫಾರಂ ನನಗೇ ನೀಡಬೇಕು. ಈಗಾಗಲೇ ಕಷ್ಟಪಟ್ಟ ಕೊಟ್ಯಂತರ ರೂಪಾಯಿ ಖರ್ಚು ಮಾಡಿದ್ದೇನೆ. ನನಗೇ ಬಿ ಫಾರಂ ನೀಡಬೇಕೆಂದು ಮನವಿ ಮಾಡಿದರು.

ಈಗ ಕುಮಾರಸ್ವಾಮಿಗೆ ಟಿಕೆಟ್ ಎಂಬ ಮಾತುಗಳು ಕೇಳಿ ಬರುತ್ತಿದೆ. ಹಾಗಾಗುವುದಿಲ್ಲ ಎಂದು ಭಾವಿಸಿದ್ದೇನೆ, ಎಚ್. ಡಿ. ಕುಮಾರಸ್ವಾಮಿ ನನಗೆ ಬಿ ಫಾರಂ ನೀಡುತ್ತಾರೆ. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ, ನಾನು ಗೆಲ್ಲುತ್ತೇನೆ, ನನಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು