3:59 PM Monday17 - November 2025
ಬ್ರೇಕಿಂಗ್ ನ್ಯೂಸ್
ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಉಂಟಾದ ಬಿರುಗಾಳಿ ಇದೀಗ ಜೆಡಿಎಸ್ ನಲ್ಲಿ!; ಬಿ.ಬಿ. ನಿಂಗಯ್ಯ- ಕುಮಾರಸ್ವಾಮಿ ನಡುವೆ ಟಿಕೆಟ್ ಗೆ ಗುದ್ದಾಟ!!

15/04/2023, 17:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಎದ್ದ ಬಿರುಗಾಳಿ ಈಗ ಜನತಾ ದಳದಲ್ಲಿಯೂ ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ವಂಚಿತ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿ ತೊರೆದು ಜನತಾ ದಳ ಸೇರಿದ್ದಾರೆ. ದಳ ಟಿಕೆಟ್ ಕುಮಾರಸ್ವಾಮಿ ಪಾಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ನಡುವೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಎಚ್ಚೆತ್ತುಕೊಂಡಿದ್ದಾರೆ. ಇಬ್ಬರ ನಡುವೆ ಟಿಕೆಟ್ ಗೆ ಗುದ್ದಾಟ ಶುರುವಾಗಿದೆ.
ಎಂ.ಪಿ. ಕುಮಾರಸ್ವಾಮಿ ಅವರು ದಳ ಅಂಗಳಕ್ಕೆ ಜಿಗಿದ ಬೆನ್ನಲ್ಲೇ ನಿಂಗಯ್ಯ ಅವರು ಅಲರ್ಟ್ ಆಗಿದ್ದಾರೆ. ಮಾಧ್ಯಮ ಜತೆ ಶನಿವಾರ ಮಾತನಾಡಿದ ಅವರು, ಮೂಡಿಗೆರೆಯಲ್ಲಿ ಯಶಸ್ವಿಯಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಕಟಿಸಿದ 93 ಜನರ ಪಟ್ಟಿಯಲ್ಲಿ ನನ್ನ ಹೆಸರಿತ್ತು.
ನನಗೆ ಬಿ ಫಾರಂ ನೀಡುತ್ತಾರೆಂದು ನನಗೆ ನಂಬಿಕೆ ಇದೆ. ಬಿಜೆಪಿಯ ಕುಮಾರಸ್ವಾಮಿ ಜೆಡಿಎಸ್ ಬಂದಿದ್ದಾರೆ. ಅವರಿಗೆ ಸ್ವಾಗತ. ಕುಮಾರಸ್ವಾಮಿ ಮೊದಲು ಜೆಡಿಎಸ್ ಪಕ್ಷದಲ್ಲಿ ದುಡಿಯಲಿ. ಇಡೀ ಮೂಡಿಗೆರೆ ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯವೂ ಅದೇ ಆಗಿದೆ. ನಿನ್ನೆಯಷ್ಟೆ ಬಂದಿದ್ದಾರೆ, ಅವರು ಮೊದಲು ಪಕ್ಷದ ಸಿದ್ದಾಂತವನ್ನ ತಿಳಿದುಕೊಳ್ಳಲಿ ಎಂದರು.
ಪಕ್ಷಕ್ಕೆ ಬಂದ ಕೂಡಲೇ ಮಣೆ ಹಾಕುವುದು ಸೂಕ್ತವಲ್ಲ. ಜೆಡಿಎಸ್ ಬಿ ಫಾರಂ ನನಗೇ ನೀಡಬೇಕು. ಈಗಾಗಲೇ ಕಷ್ಟಪಟ್ಟ ಕೊಟ್ಯಂತರ ರೂಪಾಯಿ ಖರ್ಚು ಮಾಡಿದ್ದೇನೆ. ನನಗೇ ಬಿ ಫಾರಂ ನೀಡಬೇಕೆಂದು ಮನವಿ ಮಾಡಿದರು.

ಈಗ ಕುಮಾರಸ್ವಾಮಿಗೆ ಟಿಕೆಟ್ ಎಂಬ ಮಾತುಗಳು ಕೇಳಿ ಬರುತ್ತಿದೆ. ಹಾಗಾಗುವುದಿಲ್ಲ ಎಂದು ಭಾವಿಸಿದ್ದೇನೆ, ಎಚ್. ಡಿ. ಕುಮಾರಸ್ವಾಮಿ ನನಗೆ ಬಿ ಫಾರಂ ನೀಡುತ್ತಾರೆ. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ, ನಾನು ಗೆಲ್ಲುತ್ತೇನೆ, ನನಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು