2:16 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಉಂಟಾದ ಬಿರುಗಾಳಿ ಇದೀಗ ಜೆಡಿಎಸ್ ನಲ್ಲಿ!; ಬಿ.ಬಿ. ನಿಂಗಯ್ಯ- ಕುಮಾರಸ್ವಾಮಿ ನಡುವೆ ಟಿಕೆಟ್ ಗೆ ಗುದ್ದಾಟ!!

15/04/2023, 17:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಎದ್ದ ಬಿರುಗಾಳಿ ಈಗ ಜನತಾ ದಳದಲ್ಲಿಯೂ ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ವಂಚಿತ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿ ತೊರೆದು ಜನತಾ ದಳ ಸೇರಿದ್ದಾರೆ. ದಳ ಟಿಕೆಟ್ ಕುಮಾರಸ್ವಾಮಿ ಪಾಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ನಡುವೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಎಚ್ಚೆತ್ತುಕೊಂಡಿದ್ದಾರೆ. ಇಬ್ಬರ ನಡುವೆ ಟಿಕೆಟ್ ಗೆ ಗುದ್ದಾಟ ಶುರುವಾಗಿದೆ.
ಎಂ.ಪಿ. ಕುಮಾರಸ್ವಾಮಿ ಅವರು ದಳ ಅಂಗಳಕ್ಕೆ ಜಿಗಿದ ಬೆನ್ನಲ್ಲೇ ನಿಂಗಯ್ಯ ಅವರು ಅಲರ್ಟ್ ಆಗಿದ್ದಾರೆ. ಮಾಧ್ಯಮ ಜತೆ ಶನಿವಾರ ಮಾತನಾಡಿದ ಅವರು, ಮೂಡಿಗೆರೆಯಲ್ಲಿ ಯಶಸ್ವಿಯಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಕಟಿಸಿದ 93 ಜನರ ಪಟ್ಟಿಯಲ್ಲಿ ನನ್ನ ಹೆಸರಿತ್ತು.
ನನಗೆ ಬಿ ಫಾರಂ ನೀಡುತ್ತಾರೆಂದು ನನಗೆ ನಂಬಿಕೆ ಇದೆ. ಬಿಜೆಪಿಯ ಕುಮಾರಸ್ವಾಮಿ ಜೆಡಿಎಸ್ ಬಂದಿದ್ದಾರೆ. ಅವರಿಗೆ ಸ್ವಾಗತ. ಕುಮಾರಸ್ವಾಮಿ ಮೊದಲು ಜೆಡಿಎಸ್ ಪಕ್ಷದಲ್ಲಿ ದುಡಿಯಲಿ. ಇಡೀ ಮೂಡಿಗೆರೆ ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯವೂ ಅದೇ ಆಗಿದೆ. ನಿನ್ನೆಯಷ್ಟೆ ಬಂದಿದ್ದಾರೆ, ಅವರು ಮೊದಲು ಪಕ್ಷದ ಸಿದ್ದಾಂತವನ್ನ ತಿಳಿದುಕೊಳ್ಳಲಿ ಎಂದರು.
ಪಕ್ಷಕ್ಕೆ ಬಂದ ಕೂಡಲೇ ಮಣೆ ಹಾಕುವುದು ಸೂಕ್ತವಲ್ಲ. ಜೆಡಿಎಸ್ ಬಿ ಫಾರಂ ನನಗೇ ನೀಡಬೇಕು. ಈಗಾಗಲೇ ಕಷ್ಟಪಟ್ಟ ಕೊಟ್ಯಂತರ ರೂಪಾಯಿ ಖರ್ಚು ಮಾಡಿದ್ದೇನೆ. ನನಗೇ ಬಿ ಫಾರಂ ನೀಡಬೇಕೆಂದು ಮನವಿ ಮಾಡಿದರು.

ಈಗ ಕುಮಾರಸ್ವಾಮಿಗೆ ಟಿಕೆಟ್ ಎಂಬ ಮಾತುಗಳು ಕೇಳಿ ಬರುತ್ತಿದೆ. ಹಾಗಾಗುವುದಿಲ್ಲ ಎಂದು ಭಾವಿಸಿದ್ದೇನೆ, ಎಚ್. ಡಿ. ಕುಮಾರಸ್ವಾಮಿ ನನಗೆ ಬಿ ಫಾರಂ ನೀಡುತ್ತಾರೆ. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ, ನಾನು ಗೆಲ್ಲುತ್ತೇನೆ, ನನಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು