10:02 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮೂಡಿಗೆರೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಉಂಟಾದ ಬಿರುಗಾಳಿ ಇದೀಗ ಜೆಡಿಎಸ್ ನಲ್ಲಿ!; ಬಿ.ಬಿ. ನಿಂಗಯ್ಯ- ಕುಮಾರಸ್ವಾಮಿ ನಡುವೆ ಟಿಕೆಟ್ ಗೆ ಗುದ್ದಾಟ!!

15/04/2023, 17:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ನಲ್ಲಿ ಎದ್ದ ಬಿರುಗಾಳಿ ಈಗ ಜನತಾ ದಳದಲ್ಲಿಯೂ ಕಾಣಿಸಿಕೊಂಡಿದೆ. ಬಿಜೆಪಿ ಟಿಕೆಟ್ ವಂಚಿತ ಹಾಲಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಬಿಜೆಪಿ ತೊರೆದು ಜನತಾ ದಳ ಸೇರಿದ್ದಾರೆ. ದಳ ಟಿಕೆಟ್ ಕುಮಾರಸ್ವಾಮಿ ಪಾಲಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಈ ನಡುವೆ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಮಾಜಿ ಸಚಿವ ಬಿ.ಬಿ. ನಿಂಗಯ್ಯ ಎಚ್ಚೆತ್ತುಕೊಂಡಿದ್ದಾರೆ. ಇಬ್ಬರ ನಡುವೆ ಟಿಕೆಟ್ ಗೆ ಗುದ್ದಾಟ ಶುರುವಾಗಿದೆ.
ಎಂ.ಪಿ. ಕುಮಾರಸ್ವಾಮಿ ಅವರು ದಳ ಅಂಗಳಕ್ಕೆ ಜಿಗಿದ ಬೆನ್ನಲ್ಲೇ ನಿಂಗಯ್ಯ ಅವರು ಅಲರ್ಟ್ ಆಗಿದ್ದಾರೆ. ಮಾಧ್ಯಮ ಜತೆ ಶನಿವಾರ ಮಾತನಾಡಿದ ಅವರು, ಮೂಡಿಗೆರೆಯಲ್ಲಿ ಯಶಸ್ವಿಯಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ. ಡಿಸೆಂಬರ್ ನಲ್ಲಿ ಪ್ರಕಟಿಸಿದ 93 ಜನರ ಪಟ್ಟಿಯಲ್ಲಿ ನನ್ನ ಹೆಸರಿತ್ತು.
ನನಗೆ ಬಿ ಫಾರಂ ನೀಡುತ್ತಾರೆಂದು ನನಗೆ ನಂಬಿಕೆ ಇದೆ. ಬಿಜೆಪಿಯ ಕುಮಾರಸ್ವಾಮಿ ಜೆಡಿಎಸ್ ಬಂದಿದ್ದಾರೆ. ಅವರಿಗೆ ಸ್ವಾಗತ. ಕುಮಾರಸ್ವಾಮಿ ಮೊದಲು ಜೆಡಿಎಸ್ ಪಕ್ಷದಲ್ಲಿ ದುಡಿಯಲಿ. ಇಡೀ ಮೂಡಿಗೆರೆ ಜೆಡಿಎಸ್ ಕಾರ್ಯಕರ್ತರ ಅಭಿಪ್ರಾಯವೂ ಅದೇ ಆಗಿದೆ. ನಿನ್ನೆಯಷ್ಟೆ ಬಂದಿದ್ದಾರೆ, ಅವರು ಮೊದಲು ಪಕ್ಷದ ಸಿದ್ದಾಂತವನ್ನ ತಿಳಿದುಕೊಳ್ಳಲಿ ಎಂದರು.
ಪಕ್ಷಕ್ಕೆ ಬಂದ ಕೂಡಲೇ ಮಣೆ ಹಾಕುವುದು ಸೂಕ್ತವಲ್ಲ. ಜೆಡಿಎಸ್ ಬಿ ಫಾರಂ ನನಗೇ ನೀಡಬೇಕು. ಈಗಾಗಲೇ ಕಷ್ಟಪಟ್ಟ ಕೊಟ್ಯಂತರ ರೂಪಾಯಿ ಖರ್ಚು ಮಾಡಿದ್ದೇನೆ. ನನಗೇ ಬಿ ಫಾರಂ ನೀಡಬೇಕೆಂದು ಮನವಿ ಮಾಡಿದರು.

ಈಗ ಕುಮಾರಸ್ವಾಮಿಗೆ ಟಿಕೆಟ್ ಎಂಬ ಮಾತುಗಳು ಕೇಳಿ ಬರುತ್ತಿದೆ. ಹಾಗಾಗುವುದಿಲ್ಲ ಎಂದು ಭಾವಿಸಿದ್ದೇನೆ, ಎಚ್. ಡಿ. ಕುಮಾರಸ್ವಾಮಿ ನನಗೆ ಬಿ ಫಾರಂ ನೀಡುತ್ತಾರೆ. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ, ನಾನು ಗೆಲ್ಲುತ್ತೇನೆ, ನನಗೇ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು