2:58 PM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಸಂಧಾನ ವಿಫಲ: ಬಿಜೆಪಿಗೆ ರಾಜೀನಾಮೆ ಘೋಷಿಸಿದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್

16/04/2023, 08:49

ಹುಬ್ಬಳ್ಳಿ(reporterkarnataka.com): ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಟಿಕೆಟಿಗೆ ಸಂಬಂಧಿಸಿದಂತೆ ಬಿಜೆಪಿ ಕೇಂದ್ರೀಯ ನಾಯಕರ ಜತೆ ನಡೆಸಿದ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಡರ್ ಬಿಜೆಪಿಗೆ ರಾಜೀನಾಮೆ ಘೋಷಿಸಿದಿದ್ದಾರೆ.
ಬಿಜೆಪಿ ವರಿಷ್ಢ ನಾಯಕ ಧರ್ಮೇಂದ್ರ ಪ್ರಧಾನ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಶೆಟ್ಟರ್ ಜತೆ ಸಂಧಾನ ನಡೆಸಲು ಹುಬ್ಬಳಿಯ ನಿವಾಸಕ್ಕೆ ಆಗಮಿಸಿದ್ದರು. ಆದರೆ ಕೇಂದ್ರ ನಾಯಕರ ಜತೆಗಿನ ಮಾತುಕತೆ ವಿಫಲವಾಗಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಶೆಟ್ಟರ್ ಅವರು ಪಕ್ಷಕ್ಕೆ ತನ್ನ ರಾಜೀನಾಮೆ ಘೋಷಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಬಿಜೆಪಿ ಟಿಕೆಟ್ ಕೊಡದಿದ್ದರೂ ಸ್ಪರ್ಧಿಸಿಯೇ ಸಿದ್ದ ಎಂದು ಕೇಸರಿ ಪಾಳಯಕ್ಕೆ ಸೆಡ್ಡು ಹೊಡೆದಿದ್ದಾರೆ.
ಮೊನ್ನೆಯವರೆಗೂ ನನಗೆ ಟಿಕೆಟ್ ನೀಡುವ ಭರವಸೆ ನೀಡಲಾಗಿತ್ತು. ನನ್ನ ರಾಜಕೀಯ ಇತಿಹಾಸದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲ. ನನ್ನ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪ ಇಲ್ಲ. 2018ರ ಚುನಾವಣೆಯಲ್ಲೂ 21 ಸಾವಿರ ಮತಗಳ ಅಂತರದಿಂದ ಜಯಗಳಿಸಿದ್ದೇನೆ. ಪ್ರತಿ ಬಾರಿಯ ಚುನಾವಣೆಯಲ್ಲೂ ದೊಡ್ಡ ಅಂತರದಲ್ಲಿ ಗೆಲುವು ಸಾಧಿಸಿದ್ದೇನೆ. ನನ್ನ ಕ್ಷೇತ್ರದಲ್ಲಿ ಮಾಡಲು ಇನ್ನಷ್ಟು ಕೆಲಸವಿದೆ. ಇನ್ನೊಂದು ಬಾರಿ ತನಗೆ ಅವಕಾಶ ನೀಡಬೇಕೆಂದು ಕೋರಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು