9:47 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿ ನಾಮಪತ್ರ ಸಲ್ಲಿಕೆ: ಪಾದಯಾತ್ರೆಯುದ್ಧಕ್ಕೂ ಹಿರಿಯರ ಕಾಲಿಗೆ ನಮಸ್ಕಾರ

17/04/2023, 16:45

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಇಂದು ನಾಮಪತ್ರ ಸಲ್ಲಿಸಿದರು. ಪಕ್ಷದ ಸಾವಿರಾರು ಕಾರ್ಯಕರ್ತರ ಜೊತೆ ಬಂದು ನಾಮಪತ್ರ ಸಲ್ಲಿಕೆ ಮಾಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರುಡಪ್ಪ, ತಾಪಂ ಮಾಜಿ‌ ಅಧ್ಯಕ್ಷ ಈಶ್ವರಹಳ್ಳಿ ಮಹೇಶ್, ಪತ್ನಿ ಪಲ್ಲವಿ, ಸಫಾಯಿ ಕರ್ಮಚಾರಿ ನಿಗಮ ಮಂಡಳಿ ಅಧ್ಯಕ್ಷ ವೆಂಕಟೇಶ್ ಜತೆಗಿದ್ದರು. ಚಿಕ್ಕಮಗಳೂರು ಚುನಾವಣಾ ಅಧಿಕಾರಿ ಕಿಶೋರ್ ಕುಮಾರ್ ಗೆ ರವಿ ನಾಮಪತ್ರ ಸಲ್ಲಿಸಿದರು.
3000ಕ್ಕೂ ಅಧಿಕ ಕಾರ್ಯಕರ್ತರ ಜೊತೆ ಶಾಸಕ ಸಿ.ಟಿ. ರವಿ ನಾಮಪತ್ರ ಸಲ್ಲಿಕೆಗೆ ತೆರಳಿದರು.
ನಾಮಪತ್ರ ಸಲ್ಲಿಕೆಯ ಮುನ್ನ ಕಾಮಧೇನು ಗಣಪತಿ ದೇವಸ್ಥಾನ ಹಾಗೂ ಸ್ವಗ್ರಾಮ ಚಿಕ್ಕಮಾಗವಳ್ಳಿ ಗ್ರಾಮದೇವತೆಗೆ ಪೂಜೆ ಸಲ್ಲಿಸಿದರು.
ರಸ್ತೆಯುದ್ಧಕ್ಕೂ ಸಿ.ಟಿ.ರವಿಗೆ ಹಾರ ಹಾಕಿ ಜನರು ಶುಭ ಕೋರಿದರು. ರಸ್ತೆಯುದ್ಧಕ್ಕೂ ಹಿರಿಯರ ಕಾಲಿಗೆ ಬಿದ್ದು ರವಿ ಆಶೀರ್ವಾದ ಪಡೆದರು.
ಅಭಿಮಾನಿಗಳು ಮುಂದಿನ ಮುಖ್ಯಮಂತ್ರಿ ಸಿ.ಟಿ. ರವಿ ಎಂದು ಘೋಷಣೆ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು