10:44 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ: ಮಹಮ್ಮಾಯಿ ದೇವರ ದರ್ಶನ ಪಡೆದು ಮೆರವಣಿಗೆ

17/04/2023, 22:42

ಮೂಡುಬಿದಿರೆ(reporterkarnataka.com): ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೋಮವಾರ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ತೆರಳಿ ನಾಮಪತ್ರ ಸಲ್ಲಿಸಿದರು.
ಸೋಮವಾರ ಬೃಹತ್ ಮೆರವಣಿಗೆಯಲ್ಲಿ ಮೂಡುಬಿದರೆ ಆಡಳಿತಸೌಧಕ್ಕೆ ಬಂದು ಚುನಾವಣಾಧಿಕಾರಿ ಮಹೇಶ್ಚಂದ್ರ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಸ್ವರಾಜ್ಯ ಮೈದಾನದಲ್ಲಿರುವ ಮಹಮ್ಮಾಯಿ ದೇವರ ದರ್ಶನ ಪಡೆದ ಅವರು ತಾಸೆ, ಹುಲಿವೇಷಗಳ ಕುಣಿತ, ಚೆಂಡೆ, ವಾದ್ಯ ಘೋಷಗಳೊಂದಿಗೆ ಮೆರವಣಿಗೆಯಲ್ಲಿ ತೆರದ ಜೀಪ್ ನಲ್ಲಿ ಸಾಗಿ ಬಂದರು.
ಈ ಸಂದರ್ಭದಲ್ಲಿ ಮಾತನಾಡಿದ ಮಿಥುನ್ ರೈ, ಮೂಡುಬಿದಿರೆ ಕ್ಷೇತ್ರದಲ್ಲಿ ಮತದಾರರು ನನ್ನನ್ನು ಶಾಸಕನಾಗಿ ಚುನಾಯಿಸಿದಲ್ಲಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿ ಹಾಗೂ ಸರಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಿ ಖಾಸಗಿ ಆಸ್ಪತ್ರೆಗೆ ಸಮಾನವಾದ ಚಿಕಿತ್ಸಾ ಸೌಲಭ್ಯ ಒದಗಿಸುತ್ತೇನೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋಮು ಸಂಘರ್ಷಕ್ಕೆ ನಿರುದ್ಯೋಗ ಸಮಸ್ಯೆಯೇ ಕಾರಣ ಎಂದರು.
ರಾಜಕೀಯ ಗುರು ಅಭಯಚಂದ್ರರು ಕೃಷ್ಣ, ನಾನು ಅರ್ಜುನ. ನಮ್ಮೊಳಗೆ ವೈಮನಸ್ಸು ಉಂಟಾಗಿದೆ ಎಂದು ಕೆಲವರು ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಇಂತಹ ಯಾವುದೇ ಘಟನೆ ನಡೆದಿಲ್ಲ, ಮುಂದೆಯೂ ಆಗುವುದಿಲ್ಲ. ಕ್ಷೇತ್ರಕ್ಕೆ ಅಭಯಚಂದ್ರ ಜೈನ್ ಅವರ ಕೊಡುಗೆ ಯಾರೂ ಮರೆಯುವಂತಿಲ್ಲ ಎಂದರು.
ಕೆಪಿಸಿಸಿ ವಕ್ತಾರ, ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೋಳಿ ಮಾತನಾಡಿದರು. ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ’ ಮಿಥುನ್ ರೈ ಅವರನ್ನು ಮೂಡುಬಿದಿರೆಗೆ ಆರಿಸಿದ್ದು ಕೆಪಿಸಿಸಿ ಅಲ್ಲ, ಮೂಡುಬಿದಿರೆ ಜನರೇ ಮಿಥುನ್ ರೈ ಅವರನ್ನು ಆಯ್ಕೆ ಮಾಡಿದ್ದಾರೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು