7:37 AM Friday6 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

Important News : ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ

14/07/2021, 13:46

ಮಂಗಳೂರು(ReporterKarnataka.com)
ಕೊರೊನಾ ಕಾರಣದಿಂದ ಬಾಕಿ ಉಳಿದಿರುವ ಮಂಗಳೂರು ವಿಶ್ವವಿದ್ಯಾಲಯ ಅಧೀನ ಕಾಲೇಜುಗಳ ಪದವಿ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾಲಯ ಚಿಂತನೆ ನಡೆಸಿದ್ದು, ಈ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರಕ್ಕೆ ಕಳುಹಿಸಿ ಅನುಮತಿ ಪಡೆಯಲು ತೀರ್ಮಾನಿಸಿದೆ ಎನ್ನಲಾಗಿದೆ.

ಪತ್ರಿಕೆಯೊಂದಕ್ಕೆ ವಿ.ವಿ. ಕುಲಪತಿ ಪ್ರೊ| ಪಿ.ಎಸ್. ಯಡಪಡಿತ್ತಾಯ ಅವರು ತಿಳಿಸಿರುವ ಪ್ರಕಾರ ಬಾಕಿ ಪರೀಕ್ಷೆಯನ್ನು ಮಾಡಿ ಮೌಲ್ಯಮಾಪನಕ್ಕೆ ಚಿಂತನೆ ನಡೆಸಲಾಗಿದೆ. ಆಗಸ್ಟ್ 10ರೊಳಗೆ ಈ ಎಲ್ಲ ಪ್ರಕ್ರಿಯೆ ಮುಗಿದ ಅನಂತರ 2, 4 ಹಾಗೂ 6ನೇ ಸೆಮಿಸ್ಟರ್‌ನ ಭೌತಿಕ ತರಗತಿ ಮಾಡಿ ಬಳಿಕ ಸೆಪ್ಟೆಂಬರ್ ವೇಳೆಗೆ ಇದರ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ಎಲ್ಲದರ ಬಗ್ಗೆ ಸರಕಾರದಿಂದ ಅನುಮತಿ ಪಡೆಯುವ ಹಿನ್ನೆಲೆಯಲ್ಲಿ ಪತ್ರ ಬರೆದು ಅನುಮತಿ ಪಡೆಯಲಾಗುವುದು. ಸರಕಾರದ ಅನುಮತಿ ದೊರೆತ ಅನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಪರೀಕ್ಷೆ ನಡೆಸಬೇಕಾ? ಬೇಡವೇ ಎಂಬ ಬಗ್ಗೆ ಎಲ್ಲ ಕಾಲೇಜು ಪ್ರಾಂಶುಪಾಲರ ಸಭೆಯನ್ನು ನಡೆಸಲಾ ಗಿದ್ದು, ಪರೀಕ್ಷೆ ನಡೆಸುವ ಬಗ್ಗೆ ಹೆಚ್ಚಿನವರು ಒಲವು ತೋರಿದ್ದಾರೆ. ಶೇ. 70ರಷ್ಟು ಪರೀಕ್ಷೆ ಈಗಾಗಲೇ ನಡೆದಿದ್ದು ಶೇ. 30ರಷ್ಟು ಮಾತ್ರ ಬಾಕಿ ಉಳಿದಿವೆ. ಅದನ್ನು ಮುಂದಿನ ದಿನದಲ್ಲಿ ನಡೆಸುವ ಬಗ್ಗೆ ಶೀಘ್ರ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪಿ.ಎಲ್.ಧರ್ಮ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು