11:22 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ: ಕೊನೆಗೂ ಇನಾಯತ್ ಆಲಿಗೆ ಒಲಿದ ಕಾಂಗ್ರೆಸ್ ಟಿಕೆಟ್; ನಾಳೆ ನಾಮಪತ್ರ ಸಲ್ಲಿಕೆ

19/04/2023, 21:06

ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಕೊನೆಗೂ
ಒಲಿದಿದ್ದು, ನಾಳೆ ನಾಮಪತ್ರ ಸಲ್ಲಿಸುವರು.
ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆದಿತ್ತು.
ಪ್ರಸ್ತುತ ದಿಲ್ಲಿಯಲ್ಲಿರುವ ಇನಾಯತ್ ಆಲಿ ಅವರು ಕಾಂಗ್ರೆಸ್ ಟಿಕೆಟ್ ಹಾಗೂ ಬಿ ಫಾರಂನೊಂದಿಗೆ ಇವತ್ತು ರಾತ್ರಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವರು. ನಾಳೆ ಅವರು ಮಿನಿ ವಿಧಾನಸೌಧದಲ್ಲಿರುವ ಚುನಾವಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು.
ಜಾತ್ಯತೀತ ಮನೋಭಾವದ ಇನಾಯತ್ ಅಲಿ ಅವರು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಎಂದರೆ ತಪ್ಪಾಗಲಾರದು. ವಿಧ್ಯಾರ್ಥಿ ದಿಸೆಯಿಂದಲೇ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡು ಕಾಂಗ್ರೆಸ್ ವಿಧ್ಯಾರ್ಥಿ ಘಟಕವಾದ NSUI ಮೂಲಕ ಅಂದು ಹಲವಾರು ವಿಧ್ಯಾರ್ಥಿ ಹೋರಾಟಗಳಲ್ಲಿ ಮಂಚೂಣಿಯಲ್ಲಿ ಕಾಣುತ್ತಿದ್ದ ಇನಾಯತ್ ಅವರು ಸ್ಥಳೀಯ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಸೇವೆಗೈದ ಕಟ್ಟಾ ಕಾಂಗ್ರೆಸಿಗ.
ಮೊದಲ ಬಾರಿ 1997 ನೇ ಇಸವಿಯಲ್ಲಿ NSUI ನ ಬ್ಲಾಕ್ ಅಧ್ಯಕ್ಷರಾಗಿ ಆಯ್ಕೆಯಾದ ಇವರು ನಂತರದಲ್ಲಿ 2000ನೇ ಇಸವಿಯಲ್ಲಿ NSUI ರಾಜ್ಯ ಉಪಾಧ್ಯಕ್ಷನಾಗಿ, 2003 ರಲ್ಲಿ NSUI ರಾಷ್ಟ್ರೀಯ ಕಾರ್ಯದರ್ಶಿಯಾಗಿ, 2005 ರಲ್ಲಿ NSUI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ, 2009 ರಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಪ್ರಸ್ತುತ KPCC ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹುದ್ದೆ ಮಾತ್ರವಲ್ಲದೆ NSUI ನ ರಾಜ್ಯ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷದ ಸೇವೆಗೈಯುತ್ತಿದ್ದಾರೆ.
ವೃತ್ತಿಯಲ್ಲಿ ಇನಾಯತ್ ಅಲಿ ಅವರು ಒಬ್ಬ ಯಶಸ್ವಿ ಉದ್ಯಮಿಯೂ ಹೌದು.
ಇವರು ಈ‌ ಹಿಂದಿನಿಂದಲೂ ಪ್ರತಿಫಲಾಪೇಕ್ಷೆ ಬಯಸದೆ ಸಮಾಜ ಸೇವಾ ಚಟುವಟಿಕೆಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡವರು.
ತನ್ನ ಸಾಮಾಜಿಕ ‌ಸೇವಾ ಕಾರ್ಯಗಳಿಗಾಗಿ ನೋಂದಾಯಿತ ಐಎಎಮ್ ಫೌಂಡೇಶನ್ ಸಂಸ್ಥೆಯನ್ನು ಸ್ಥಾಪಿಸಿ ಸಂಸ್ಥೆಯ ಮೂಲಕ ಕಳೆದ ಹಲವಾರು ವರ್ಷಗಳಿಂದ ಬಡಜನರ ಶೈಕ್ಷಣಿಕ, ಆರೋಗ್ಯ, ವಸತಿ ಇತ್ಯಾದಿ ಅಗತ್ಯಗಳಿಗೆ ಸ್ಪಂದಿಸಿದ್ದಾರೆ ಹಾಗೂ ಅದೆಷ್ಟೋ ಬಡ ಕುಟುಂಬದ ಯುವತಿಯರ ವಿವಾಹ ಕಾರ್ಯದಲ್ಲಿ ಜಾತಿ-ಮತ ನೋಡದೆ ಸಹಾಯ ಮಾಡಿರುತ್ತಾರೆ. ಮಂಗಳೂರು ಉತ್ತರ ಕ್ಷೇತ್ರದಲ್ಲೂ ವರ್ಷಗಳಿಂದ ನಿರಂತರವಾಗಿ ತನ್ನ ಸೇವಾ ಚಟುವಟಿಕೆಗಳ ಮೂಲಕ ತನ್ನದೇ ಆದ ಛಾಪನ್ನು ಮೂಡಿಸಿರುತ್ತಾರೆ.
ಕೊರೋನ ಸಂಧರ್ಭದಲ್ಲೂ ಆರ್ಥಿಕವಾಗಿ ಕಂಗೆಟ್ಟಿದ್ದ ಅದೆಷ್ಟೋ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.
ಸ್ನೇಹಮಯಿ, ಸದಾ ಹಸನ್ಮುಖಿ ಮತ್ತು ಸಂವೇದನಾಶೀಲ ಗುಣವುಳ್ಳ ವ್ಯಕ್ತಿತ್ವ ಇನಾಯತ್ ಅಲಿ ಅವರದ್ದಾಗಿದೆ.
ಇವರು ರಾಜಕೀಯ, ಸಾಮಾಜಿಕ ರಂಗದಲ್ಲಿ ಸಾಕಷ್ಟು ಅನುಭವವನ್ನು ಹೊಂದಿರುತ್ತಾರೆ.
ತನ್ನ ಸೇವಾ ಚಟುವಟಿಕೆಗಳ ಮೂಲಕ ಹೆಸರಾಗಿರುವ ಇವರು ಈ ಬಾರಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ವಿರೋಧ ಪಕ್ಷಗಳಿಗೆ ಪ್ರಬಲ ಪ್ರತಿಸ್ಪರ್ಧಿಯಾಗಲಿದ್ದಾರೆ ಎಂದು ರಾಜಕೀಯ ತಜ್ಞರ ಅಭಿಪ್ರಾಯ.

ಇತ್ತೀಚಿನ ಸುದ್ದಿ

ಜಾಹೀರಾತು