6:04 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಮಂಗಳೂರು ದಕ್ಷಿಣ ಕ್ಷೇತ್ರ: ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ ನಾಮಪತ್ರ ಸಲ್ಲಿಕೆ; ಭಾರಿ ಜನಸ್ತೋಮದೊಂದಿಗೆ ಪಾದಯಾತ್ರೆಯಲ್ಲಿ ಆಗಮನ

20/04/2023, 12:21

ಮಂಗಳೂರು(reporterkarnataka.com): ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೋ ಅವರು ಗುರುವಾರ ಭಾರಿ ಸಂಖ್ಯೆಯಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಜತೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಇದಕ್ಕೆ ಮುನ್ನ ಅಭ್ಯರ್ಥಿಯಾದ
ಜೆ.ಆರ್. ಲೋಬೊ, ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹಾಗೂ ಪಕ್ಷದ ಮುಖಂಡರು ಬೆಳಗ್ಗೆ ನಗರದ ವಿವಿಧ ದೇವಾಲಯಗಳು, ಚರ್ಚ್, ಮಸೀದಿಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ
ಕುದ್ರೋಳಿ ಶ್ರೀ ಗೋಕರ್ಣನಾಥ ಕೇತ್ರದಲ್ಲಿ ಪೂಜೆ ಸಲ್ಲಿಸಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳ ಜತೆಗೆ ಪಾದಯಾತ್ರೆಯಲ್ಲಿ ಮಣ್ಣಗುಡ್ಡೆ ಮಂಗಳಾಸ್ಟೇಡಿಯಂ ಬಳಿ ಆಗಮಿಸಿದರು. ಅಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ಬಳಿಕ ಮಂಗಳೂರು ಮಹಾನಗರ ಪಾಲಿಕೆ ಕಚೇರಿಯಲ್ಲಿರುವ
ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಪಕ್ಷದ ಹಿರಿಯ ಮುಖಂಡ ಕಳ್ಳಿಗೆ ತಾರನಾಥ ಶೆಟ್ಟಿ, ಎಂ.ಶಶಿಧರ ಹೆಗ್ಡೆ, ಪ್ರಕಾಶ್ ಸಾಲಿಯಾನ್, ಅಬ್ದುಲ್ ಸಲೀಂ.,ಟಿ.ಕೆ.ಸುಧೀರ್, ಸಬಿತಾ ಮಿಸ್ಕಿತ್, ಮೋಹನ್ ಶೆಟ್ಟಿ, ಅಲೆಸ್ಟರ್ ಡಿಕುನ್ನಾ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು