2:36 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ರಾಜ್ಯದಲ್ಲೇ ಮಂಗಳೂರನ್ನು 2ನೇ ನಗರವಾಗಿ ಅಭಿವೃದ್ಧಿಪಡಿಸಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ

20/04/2023, 18:14

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ರಾಜ್ಯದಲ್ಲಿಯೇ ಎರಡನೇ ನಗರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಹೇಳಿದರು.
ನಗರದ ಲಾಲ್ ಬಾಗ್ ನ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿ ಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಮಂಗಳೂರಿನ ಅಭಿವೃದ್ಧಿಗೆ ನೀವೆಲ್ಲರೂ ಕೈಜೋಡಿಸಬೇಕು. ನಾವೆಲ್ಲರು ಸೇರಿ ಮಂಗಳೂರನ್ನು ರಾಜ್ಯದ ಎರಡನೇ ನಗರವಾಗಿ ಅಭಿವೃದ್ಧಿಪಡಿಸೋಣ. ಮಂಗಳೂರಿನಲ್ಲಿ ಉದ್ಯೋಗಗಳು ದೊರಕಬೇಕು. ಮಂಗಳೂರಿನ ಜನತೆ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರ ತರಹ ಬದುಕಬೇಕು. ನಮ್ಮ ಸಂವಿಧಾನದ ಆಶಯಗಳೇನಿದೆ ಅದರ ಪ್ರಕಾರ ಜಾತಿ-ಮತ ಬೇಧವಿಲ್ಲದೆ. ಎಲ್ಲ ಧರ್ಮಗಳ ಸಮಾನವಾಗಿ ಕಂಡು, ಎಲ್ಲರನ್ನು ಪ್ರೀತಿಸಿ ಸಾಮರಸ್ಯದ ಬದುಕನ್ನು ಕಾಣಬೇಕು. ಅದೇ ನಮ್ಮ ಗುರಿ. ನಮ್ಮಲ್ಲಿ ಬಂಡವಾಳ ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕ, ಯುವತಿಯರಿಗೆ ಮಂಗಳೂರಿನಲ್ಲೇ ಉದ್ಯೋಗ ದೊರಕುವ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ಜಾತಿ- ಮತ- ಧರ್ಮದ ಬೇಧವಿಲ್ಲದೆ ಉತ್ತಮ ಬಾಳ್ವೆ ಮಾಡುವ ವಾತಾವರಣ ನಿರ್ಮಾಣವಾಗಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು