10:34 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ರಾಜ್ಯದಲ್ಲೇ ಮಂಗಳೂರನ್ನು 2ನೇ ನಗರವಾಗಿ ಅಭಿವೃದ್ಧಿಪಡಿಸಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ

20/04/2023, 18:14

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ರಾಜ್ಯದಲ್ಲಿಯೇ ಎರಡನೇ ನಗರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಹೇಳಿದರು.
ನಗರದ ಲಾಲ್ ಬಾಗ್ ನ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿ ಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಮಂಗಳೂರಿನ ಅಭಿವೃದ್ಧಿಗೆ ನೀವೆಲ್ಲರೂ ಕೈಜೋಡಿಸಬೇಕು. ನಾವೆಲ್ಲರು ಸೇರಿ ಮಂಗಳೂರನ್ನು ರಾಜ್ಯದ ಎರಡನೇ ನಗರವಾಗಿ ಅಭಿವೃದ್ಧಿಪಡಿಸೋಣ. ಮಂಗಳೂರಿನಲ್ಲಿ ಉದ್ಯೋಗಗಳು ದೊರಕಬೇಕು. ಮಂಗಳೂರಿನ ಜನತೆ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರ ತರಹ ಬದುಕಬೇಕು. ನಮ್ಮ ಸಂವಿಧಾನದ ಆಶಯಗಳೇನಿದೆ ಅದರ ಪ್ರಕಾರ ಜಾತಿ-ಮತ ಬೇಧವಿಲ್ಲದೆ. ಎಲ್ಲ ಧರ್ಮಗಳ ಸಮಾನವಾಗಿ ಕಂಡು, ಎಲ್ಲರನ್ನು ಪ್ರೀತಿಸಿ ಸಾಮರಸ್ಯದ ಬದುಕನ್ನು ಕಾಣಬೇಕು. ಅದೇ ನಮ್ಮ ಗುರಿ. ನಮ್ಮಲ್ಲಿ ಬಂಡವಾಳ ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕ, ಯುವತಿಯರಿಗೆ ಮಂಗಳೂರಿನಲ್ಲೇ ಉದ್ಯೋಗ ದೊರಕುವ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ಜಾತಿ- ಮತ- ಧರ್ಮದ ಬೇಧವಿಲ್ಲದೆ ಉತ್ತಮ ಬಾಳ್ವೆ ಮಾಡುವ ವಾತಾವರಣ ನಿರ್ಮಾಣವಾಗಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು