9:01 PM Saturday5 - July 2025
ಬ್ರೇಕಿಂಗ್ ನ್ಯೂಸ್
ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು

ಇತ್ತೀಚಿನ ಸುದ್ದಿ

ರಾಜ್ಯದಲ್ಲೇ ಮಂಗಳೂರನ್ನು 2ನೇ ನಗರವಾಗಿ ಅಭಿವೃದ್ಧಿಪಡಿಸಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ

20/04/2023, 18:14

ಮಂಗಳೂರು(reporterkarnataka.com): ಮಂಗಳೂರು ನಗರವನ್ನು ರಾಜ್ಯದಲ್ಲಿಯೇ ಎರಡನೇ ನಗರವಾಗಿ ಅಭಿವೃದ್ದಿಪಡಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೊ ಹೇಳಿದರು.
ನಗರದ ಲಾಲ್ ಬಾಗ್ ನ ಪಾಲಿಕೆ ಕಚೇರಿಯಲ್ಲಿರುವ ಚುನಾವಣಾಧಿಕಾರಿ ಕಚೇರಿ ಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ ಬಳಿಕ ಅವರು ಮಾಧ್ಯಮದ ಜತೆ ಮಾತನಾಡಿದರು.
ಮಂಗಳೂರಿನ ಅಭಿವೃದ್ಧಿಗೆ ನೀವೆಲ್ಲರೂ ಕೈಜೋಡಿಸಬೇಕು. ನಾವೆಲ್ಲರು ಸೇರಿ ಮಂಗಳೂರನ್ನು ರಾಜ್ಯದ ಎರಡನೇ ನಗರವಾಗಿ ಅಭಿವೃದ್ಧಿಪಡಿಸೋಣ. ಮಂಗಳೂರಿನಲ್ಲಿ ಉದ್ಯೋಗಗಳು ದೊರಕಬೇಕು. ಮಂಗಳೂರಿನ ಜನತೆ ಸೌಹಾರ್ದತೆಯಿಂದ ಅಣ್ಣ-ತಮ್ಮಂದಿರ ತರಹ ಬದುಕಬೇಕು. ನಮ್ಮ ಸಂವಿಧಾನದ ಆಶಯಗಳೇನಿದೆ ಅದರ ಪ್ರಕಾರ ಜಾತಿ-ಮತ ಬೇಧವಿಲ್ಲದೆ. ಎಲ್ಲ ಧರ್ಮಗಳ ಸಮಾನವಾಗಿ ಕಂಡು, ಎಲ್ಲರನ್ನು ಪ್ರೀತಿಸಿ ಸಾಮರಸ್ಯದ ಬದುಕನ್ನು ಕಾಣಬೇಕು. ಅದೇ ನಮ್ಮ ಗುರಿ. ನಮ್ಮಲ್ಲಿ ಬಂಡವಾಳ ಹೂಡಿಕೆಯಾಗಿ, ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕ, ಯುವತಿಯರಿಗೆ ಮಂಗಳೂರಿನಲ್ಲೇ ಉದ್ಯೋಗ ದೊರಕುವ ವಾತಾವರಣ ನಿರ್ಮಾಣವಾಗಬೇಕು. ಯಾವುದೇ ಜಾತಿ- ಮತ- ಧರ್ಮದ ಬೇಧವಿಲ್ಲದೆ ಉತ್ತಮ ಬಾಳ್ವೆ ಮಾಡುವ ವಾತಾವರಣ ನಿರ್ಮಾಣವಾಗಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು