3:24 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಕ್ಷೇತ್ರದ ಜನರ ಸೇವಕನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

20/04/2023, 19:38

ಬಂಟ್ವಾಳ(reporterkarnataka.com):
ನಿಮ್ಮ ಮನೆಯ ಮಗನಾಗಿ, ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.ಕ್ಷೇತ್ರದಲ್ಲಿ ಮೂರು ಬಾರಿ ಪಾದಯಾತ್ರೆ ನಡೆಸಿದ್ದೇನೆ, ಆ ಸಂದರ್ಭದಲ್ಲಿ ಗ್ರಾಮದ ಸಮಸ್ಯೆ ಗಳನ್ನು ಕಂಡಿದ್ದೇನೆ. ಆ ಬಳಿಕ ಅಂತಹ ಗ್ರಾಮಗಳಿಗೆ ಪ್ರಥಮ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಕಳೆದ ಅನೇಕ ವರ್ಷಗಳಲ್ಲಿ ಅಭಿವೃದ್ಧಿ ಕಾಣದೆ ಇದ್ದು, ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿರುವ ಗ್ರಾಮೀಣ ಭಾಗಗಳಲ್ಲಿ ಮೊದಲ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇದರ ಜೊತೆಯಲ್ಲಿ ಕ್ಷೇತ್ರದ ಪ್ರತಿ ಗ್ರಾಮ ಕ್ಕೂ ಸಮಾನ ರೀತಿಯಲ್ಲಿ ಅನುದಾನ ನೀಡಿ, ಅಭಿವೃದ್ಧಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಮುಂದಿನ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ರಾಜ್ಯದಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ ಅನಿಟ್ಟಿನಲ್ಲಿ ಬಿಜೆಪಿಯಿಂದ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿ ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾದವ ಮಾವೆ, ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯ ರಾದ ಜಯಪ್ರಸಾದ್ ,ಸಂದೀಪ್, ಜಯಂತಿ, ಮೀನಾಕ್ಷಿ , ಪ್ರಮುಖರಾದ ಸೀಮಾಮಾದವ, ದೇವಿಪ್ರಸಾದ್ ಶೆಟ್ಟಿ, ಚಿದಾನಂದ ಕಲ್ಮಲೆ, ರಮೇಶ್ ಮೈರ, ದಿನೇಶ್ ಗಣೇಶ್ ಕೋಡಿ, ವೀರಪ್ಪ ಮೂಲ್ಯ, ಗಿರಿಯಪ್ಪ ಗೌಡ, ಕೇಶವ ಶೆಟ್ಟಿ ಕೋಡಿ, ಚಂದ್ರಶೇಖರ್ ಬಾಯಿಲ, ನೋಣಯ್ಯ ಎಂ.ಆರ್, ಬೂತ್ ಸಮಿತಿ ಅಧ್ಯಕ್ಷರುಗಳಾದ ಸದಾಶಿವ ಕೇಪುಲಕೋಡಿ,ಪ್ರಕಾಶ್ ಪೂಜಾರಿ, ಧನಂಜಯ ಪಾದೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು