5:10 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ಕ್ಷೇತ್ರದ ಜನರ ಸೇವಕನಾಗಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದೇನೆ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

20/04/2023, 19:38

ಬಂಟ್ವಾಳ(reporterkarnataka.com):
ನಿಮ್ಮ ಮನೆಯ ಮಗನಾಗಿ, ಕ್ಷೇತ್ರದ ಜನರ ಸೇವಕನಾಗಿ, ಅತ್ಯಂತ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದೇನೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.
ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವೀರಕಂಭ ಗ್ರಾಮದಲ್ಲಿ ಪ್ರಮುಖರ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.ಕ್ಷೇತ್ರದಲ್ಲಿ ಮೂರು ಬಾರಿ ಪಾದಯಾತ್ರೆ ನಡೆಸಿದ್ದೇನೆ, ಆ ಸಂದರ್ಭದಲ್ಲಿ ಗ್ರಾಮದ ಸಮಸ್ಯೆ ಗಳನ್ನು ಕಂಡಿದ್ದೇನೆ. ಆ ಬಳಿಕ ಅಂತಹ ಗ್ರಾಮಗಳಿಗೆ ಪ್ರಥಮ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಕಳೆದ ಅನೇಕ ವರ್ಷಗಳಲ್ಲಿ ಅಭಿವೃದ್ಧಿ ಕಾಣದೆ ಇದ್ದು, ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿರುವ ಗ್ರಾಮೀಣ ಭಾಗಗಳಲ್ಲಿ ಮೊದಲ ಆದ್ಯತೆಯಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದು ಅವರು ತಿಳಿಸಿದರು.
ಇದರ ಜೊತೆಯಲ್ಲಿ ಕ್ಷೇತ್ರದ ಪ್ರತಿ ಗ್ರಾಮ ಕ್ಕೂ ಸಮಾನ ರೀತಿಯಲ್ಲಿ ಅನುದಾನ ನೀಡಿ, ಅಭಿವೃದ್ಧಿ ಮಾಡಿದ್ದೇನೆ ಎಂದು ಅವರು ತಿಳಿಸಿದರು.
ಮುಂದಿನ ಅವಧಿಯಲ್ಲಿ ಬಂಟ್ವಾಳ ಕ್ಷೇತ್ರವನ್ನು ರಾಜ್ಯದಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಅಭಿವೃದ್ಧಿ ಮಾಡಬೇಕಾಗಿದೆ ಅನಿಟ್ಟಿನಲ್ಲಿ ಬಿಜೆಪಿಯಿಂದ ನನಗೆ ಅವಕಾಶ ನೀಡಿ ಶಾಸಕನಾಗಿ ಆಯ್ಕೆ ಮಾಡಿ ಎಂದು ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಮಾದವ ಮಾವೆ, ಗ್ರಾಮಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯ ರಾದ ಜಯಪ್ರಸಾದ್ ,ಸಂದೀಪ್, ಜಯಂತಿ, ಮೀನಾಕ್ಷಿ , ಪ್ರಮುಖರಾದ ಸೀಮಾಮಾದವ, ದೇವಿಪ್ರಸಾದ್ ಶೆಟ್ಟಿ, ಚಿದಾನಂದ ಕಲ್ಮಲೆ, ರಮೇಶ್ ಮೈರ, ದಿನೇಶ್ ಗಣೇಶ್ ಕೋಡಿ, ವೀರಪ್ಪ ಮೂಲ್ಯ, ಗಿರಿಯಪ್ಪ ಗೌಡ, ಕೇಶವ ಶೆಟ್ಟಿ ಕೋಡಿ, ಚಂದ್ರಶೇಖರ್ ಬಾಯಿಲ, ನೋಣಯ್ಯ ಎಂ.ಆರ್, ಬೂತ್ ಸಮಿತಿ ಅಧ್ಯಕ್ಷರುಗಳಾದ ಸದಾಶಿವ ಕೇಪುಲಕೋಡಿ,ಪ್ರಕಾಶ್ ಪೂಜಾರಿ, ಧನಂಜಯ ಪಾದೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು