5:16 AM Saturday18 - May 2024
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ: ಮೇ 20ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನ ನಟಿ ಪವಿತ್ರಾ ಜಯರಾಂ ಸ್ನೇಹಿತ ಚಂದ್ರಕಾಂತ್ ಆತ್ಮಹತ್ಯೆ: ಸ್ನೇಹಿತೆ ಸಾವನ್ನಪ್ಪಿ ವಾರದೊಳಗೆ ಚಂದ್ರು… ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ…

ಇತ್ತೀಚಿನ ಸುದ್ದಿ

ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು; ಶಾಸಕ ರಮೇಶ್ ಕುಮಾರ್

15/07/2021, 07:32

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ . ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು.

ಮಾವು ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು ಮತ್ತಿತರರು ಬರುತ್ತಾರೆ . ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು.

ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು .ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು . ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಆನಂದ್ , ಪುರಸಭಾಧ್ಯಕ್ಷ ಲಲಿತಾ ಶ್ರೀನಿವಾಸ್ , ಮುಖ್ಯಾಧಿಕಾರಿ ಸತ್ಯನಾರಾಯಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಮುಖಂಡರಾದ  ಕೆ.ಕೆ.ಮಂಜುನಾಥರೆಡ್ಡಿ ,ಅಧಿಕಾರಿ ಆಶಾರಾಣಪ್ಪ , ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು