10:49 AM Monday24 - August 2026
ಬ್ರೇಕಿಂಗ್ ನ್ಯೂಸ್
ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು

ಇತ್ತೀಚಿನ ಸುದ್ದಿ

ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು; ಶಾಸಕ ರಮೇಶ್ ಕುಮಾರ್

15/07/2021, 07:32

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಶ್ರೀನಿವಾಸಪುರ ಪುರಸಭೆ ಮುಖ್ಯಾಧಿಕಾರಿ ಕೊಳೆತು ನಾರುತ್ತಿರುವ ಮಾವಿನ ಮಂಡಿ ಪ್ರದೇಶದ ಸ್ವಚ್ಛತೆಗೆ ಅಗತ್ಯ ಗಮನ ನೀಡಬೇಕು. ಅಲ್ಲಿ ಉಂಟಾಗಿರುವ ಅನಾರೋಗ್ಯ ಪರಿಸರವನ್ನು ಸರಿಪಡಿಸಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸರ್ಕಾರ ಹಾಗೂ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ , ತಾಲ್ಲೂಕಿನ ಕಾರ್ಮಿಕರಿಗೆ ದಿನಸಿ ಹಾಗೂ ಸುರಕ್ಷಾ ಕಿಟ್ ವಿತರಿಸಿ ಅವರು ಮಾತನಾಡಿದರು.

ಕೋವಿಡ್ ಸಂದರ್ಭದಲ್ಲಿ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ . ಅವರಿಗೆ ಅಗತ್ಯವಾದ ನೆರವು ನೀಡಲಾಗುವುದು ಎಂದು ಹೇಳಿದರು.

ಮಾವು ಖರೀದಿಗೆ ದೇಶದ ವಿವಿಧ ರಾಜ್ಯಗಳಿಂದ ವ್ಯಾಪಾರಿಗಳು ಮತ್ತಿತರರು ಬರುತ್ತಾರೆ . ಅವರ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ಮಾಡಿದರು.

ತಾಲ್ಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು .ಪಟ್ಟಣದ ವಿವಿಧ ಬಡಾವಣೆಗಳ ಬಡವರಿಗೆ ಮನೆ ನಿವೇಶನ ನೀಡಲಾಗುವುದು . ಪಟ್ಟಣದಲ್ಲಿ ರಸ್ತೆ ನಿರ್ಮಾಣ ಹಾಗೂ ದುರಸ್ತಿಗೆ ಗಮನ ನೀಡಲಾಗುವುದು ಎಂದು ಹೇಳಿದರು.

ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ , ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್ಆನಂದ್ , ಪುರಸಭಾಧ್ಯಕ್ಷ ಲಲಿತಾ ಶ್ರೀನಿವಾಸ್ , ಮುಖ್ಯಾಧಿಕಾರಿ ಸತ್ಯನಾರಾಯಣ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್ , ಮುಖಂಡರಾದ  ಕೆ.ಕೆ.ಮಂಜುನಾಥರೆಡ್ಡಿ ,ಅಧಿಕಾರಿ ಆಶಾರಾಣಪ್ಪ , ಮಾಜಿ ಅಧ್ಯಕ್ಷ ಶ್ರೀನಿವಾಸ್ ಇತರರು ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು