3:26 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆ ಅಸಲಿ; ಶಾಸಕ ಕೋಟ್ಯಾನ್ ಮಾನನಷ್ಟ ಮೊಕದ್ದಮೆ ಹೂಡಲಿ: ಮಿಥುನ್ ರೈ ಸವಾಲು

22/04/2023, 10:19

ಮಂಗಳೂರು(reporterkarnataka.com):ಶಾಸಕ ಉಮಾನಾಥ ಕೋಟ್ಯಾನ್ ಅವರ ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ದಾಖಲೆ ಅಸಲಿಯಾಗಿದ್ದು, ಶಾಸಕರು ಮಾನನಷ್ಟ ಮೊಕದ್ದಮೆ ಹಾಕುವ ಕೆಲಸವನ್ನು ಬೇಗನೆ ಮಾಡಲಿ. ಅವರ ಸವಾಲನ್ನು ಸ್ವೀಕರಿಸಲು ಸಿದ್ದ ಎಂದು ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪ್ರತಿ ಸವಾಲು ಹಾಕಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಸರಕಾರದ ಹಂತದಲ್ಲಿ ನಡೆಸಿರುವ ಪತ್ರಗಳ ದೃಢೀಕೃತ ಪ್ರತಿಗಳನ್ನು ಪಡೆದು ಹೇಳಿಕೆ ನೀಡಿದ್ದೇನೆ ಎಂದರು.
ಆಧಾರ ರಹಿತ ಹೇಳಿಕೆ ನೀಡುವುದಕ್ಕೆ ನನಗೆ ಉಮಾನಾಥ ಕೋಟ್ಯಾನ್ ಅವರ ಮೇಲೆ ಯಾವುದೇ ವೈಯಕ್ತಿ ದ್ವೇಷ ಇಲ್ಲ. ಈ ಬಗ್ಗೆ ಯಾವ ದೈವದ ಮುಂದೆ ಈ ಪ್ರದೇಶದ ಜನರ ಮುಂದೆ ನಮ್ಮ ಮಾತುಗಳನ್ನು ಪುನರುಚ್ಚರಿಸುತ್ತೇವೆ. ನಾವು ಸತ್ಯವನ್ನೇ ಹೇಳುತ್ತಿದ್ದೇವೆ. ಯಾರನ್ನೂ ತೇಜೋವಧೆ ಮಾಡುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಕರ್ನಿರೆ, ಅತಿಕಾರಿ ಬೆಟ್ಟು, ಬಳ್ಕುಂಜೆ, ಕೊಲ್ಲೂರು, ಉಳಿಪ್ಪಾಡಿಯಲ್ಲಿ 800 ರಿಂದ 900 ಎಕರೆ ಭೂಮಿ ಕೈಗಾರಿಕಾ ಉದ್ದೇಶಕ್ಕೆ ನೀಡಲು ಜನರು ಸಿದ್ದರಾಗಿದ್ದಾರೆ. ಲಭ್ಯ ವಿರುವ ಈ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಅಂದಿನ ಕೈಗಾರಿಕಾ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಬರೆದಿರುವ ಪತ್ರ ಪ್ರತಿಯನ್ನು ಮತ್ತು ಮುಖ್ಯಮಂತ್ರಿ ವತಿಯಿಂದ ಶಾಸಕ ಉಮಾನಾಥ ಕೊಟ್ಯಾನ್ ರಿಗೆ ನೀಡಲಾದ ಟಿಪ್ಪಣಿ ಪ್ರತಿಗಳನ್ನು ಸುದ್ದಿಗೋಷ್ಠಿಯಲ್ಲಿ ಹಾಜರು ಪಡಿಸಿದದರು. ಈ ದಾಖಲೆಗಳನ್ನು ನಕಲಿ ಎಂದು ಉಮಾನಾಥ ಕೋಟ್ಯಾನ್ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು