3:46 AM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆ ಅಸಲಿ; ಶಾಸಕ ಕೋಟ್ಯಾನ್ ಮಾನನಷ್ಟ ಮೊಕದ್ದಮೆ ಹೂಡಲಿ: ಮಿಥುನ್ ರೈ ಸವಾಲು

22/04/2023, 10:19

ಮಂಗಳೂರು(reporterkarnataka.com):ಶಾಸಕ ಉಮಾನಾಥ ಕೋಟ್ಯಾನ್ ಅವರ ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ದಾಖಲೆ ಅಸಲಿಯಾಗಿದ್ದು, ಶಾಸಕರು ಮಾನನಷ್ಟ ಮೊಕದ್ದಮೆ ಹಾಕುವ ಕೆಲಸವನ್ನು ಬೇಗನೆ ಮಾಡಲಿ. ಅವರ ಸವಾಲನ್ನು ಸ್ವೀಕರಿಸಲು ಸಿದ್ದ ಎಂದು ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪ್ರತಿ ಸವಾಲು ಹಾಕಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಸರಕಾರದ ಹಂತದಲ್ಲಿ ನಡೆಸಿರುವ ಪತ್ರಗಳ ದೃಢೀಕೃತ ಪ್ರತಿಗಳನ್ನು ಪಡೆದು ಹೇಳಿಕೆ ನೀಡಿದ್ದೇನೆ ಎಂದರು.
ಆಧಾರ ರಹಿತ ಹೇಳಿಕೆ ನೀಡುವುದಕ್ಕೆ ನನಗೆ ಉಮಾನಾಥ ಕೋಟ್ಯಾನ್ ಅವರ ಮೇಲೆ ಯಾವುದೇ ವೈಯಕ್ತಿ ದ್ವೇಷ ಇಲ್ಲ. ಈ ಬಗ್ಗೆ ಯಾವ ದೈವದ ಮುಂದೆ ಈ ಪ್ರದೇಶದ ಜನರ ಮುಂದೆ ನಮ್ಮ ಮಾತುಗಳನ್ನು ಪುನರುಚ್ಚರಿಸುತ್ತೇವೆ. ನಾವು ಸತ್ಯವನ್ನೇ ಹೇಳುತ್ತಿದ್ದೇವೆ. ಯಾರನ್ನೂ ತೇಜೋವಧೆ ಮಾಡುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಕರ್ನಿರೆ, ಅತಿಕಾರಿ ಬೆಟ್ಟು, ಬಳ್ಕುಂಜೆ, ಕೊಲ್ಲೂರು, ಉಳಿಪ್ಪಾಡಿಯಲ್ಲಿ 800 ರಿಂದ 900 ಎಕರೆ ಭೂಮಿ ಕೈಗಾರಿಕಾ ಉದ್ದೇಶಕ್ಕೆ ನೀಡಲು ಜನರು ಸಿದ್ದರಾಗಿದ್ದಾರೆ. ಲಭ್ಯ ವಿರುವ ಈ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಅಂದಿನ ಕೈಗಾರಿಕಾ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಬರೆದಿರುವ ಪತ್ರ ಪ್ರತಿಯನ್ನು ಮತ್ತು ಮುಖ್ಯಮಂತ್ರಿ ವತಿಯಿಂದ ಶಾಸಕ ಉಮಾನಾಥ ಕೊಟ್ಯಾನ್ ರಿಗೆ ನೀಡಲಾದ ಟಿಪ್ಪಣಿ ಪ್ರತಿಗಳನ್ನು ಸುದ್ದಿಗೋಷ್ಠಿಯಲ್ಲಿ ಹಾಜರು ಪಡಿಸಿದದರು. ಈ ದಾಖಲೆಗಳನ್ನು ನಕಲಿ ಎಂದು ಉಮಾನಾಥ ಕೋಟ್ಯಾನ್ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು