3:31 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆ ಅಸಲಿ; ಶಾಸಕ ಕೋಟ್ಯಾನ್ ಮಾನನಷ್ಟ ಮೊಕದ್ದಮೆ ಹೂಡಲಿ: ಮಿಥುನ್ ರೈ ಸವಾಲು

22/04/2023, 10:19

ಮಂಗಳೂರು(reporterkarnataka.com):ಶಾಸಕ ಉಮಾನಾಥ ಕೋಟ್ಯಾನ್ ಅವರ ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ದಾಖಲೆ ಅಸಲಿಯಾಗಿದ್ದು, ಶಾಸಕರು ಮಾನನಷ್ಟ ಮೊಕದ್ದಮೆ ಹಾಕುವ ಕೆಲಸವನ್ನು ಬೇಗನೆ ಮಾಡಲಿ. ಅವರ ಸವಾಲನ್ನು ಸ್ವೀಕರಿಸಲು ಸಿದ್ದ ಎಂದು ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪ್ರತಿ ಸವಾಲು ಹಾಕಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಸರಕಾರದ ಹಂತದಲ್ಲಿ ನಡೆಸಿರುವ ಪತ್ರಗಳ ದೃಢೀಕೃತ ಪ್ರತಿಗಳನ್ನು ಪಡೆದು ಹೇಳಿಕೆ ನೀಡಿದ್ದೇನೆ ಎಂದರು.
ಆಧಾರ ರಹಿತ ಹೇಳಿಕೆ ನೀಡುವುದಕ್ಕೆ ನನಗೆ ಉಮಾನಾಥ ಕೋಟ್ಯಾನ್ ಅವರ ಮೇಲೆ ಯಾವುದೇ ವೈಯಕ್ತಿ ದ್ವೇಷ ಇಲ್ಲ. ಈ ಬಗ್ಗೆ ಯಾವ ದೈವದ ಮುಂದೆ ಈ ಪ್ರದೇಶದ ಜನರ ಮುಂದೆ ನಮ್ಮ ಮಾತುಗಳನ್ನು ಪುನರುಚ್ಚರಿಸುತ್ತೇವೆ. ನಾವು ಸತ್ಯವನ್ನೇ ಹೇಳುತ್ತಿದ್ದೇವೆ. ಯಾರನ್ನೂ ತೇಜೋವಧೆ ಮಾಡುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಕರ್ನಿರೆ, ಅತಿಕಾರಿ ಬೆಟ್ಟು, ಬಳ್ಕುಂಜೆ, ಕೊಲ್ಲೂರು, ಉಳಿಪ್ಪಾಡಿಯಲ್ಲಿ 800 ರಿಂದ 900 ಎಕರೆ ಭೂಮಿ ಕೈಗಾರಿಕಾ ಉದ್ದೇಶಕ್ಕೆ ನೀಡಲು ಜನರು ಸಿದ್ದರಾಗಿದ್ದಾರೆ. ಲಭ್ಯ ವಿರುವ ಈ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಅಂದಿನ ಕೈಗಾರಿಕಾ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಬರೆದಿರುವ ಪತ್ರ ಪ್ರತಿಯನ್ನು ಮತ್ತು ಮುಖ್ಯಮಂತ್ರಿ ವತಿಯಿಂದ ಶಾಸಕ ಉಮಾನಾಥ ಕೊಟ್ಯಾನ್ ರಿಗೆ ನೀಡಲಾದ ಟಿಪ್ಪಣಿ ಪ್ರತಿಗಳನ್ನು ಸುದ್ದಿಗೋಷ್ಠಿಯಲ್ಲಿ ಹಾಜರು ಪಡಿಸಿದದರು. ಈ ದಾಖಲೆಗಳನ್ನು ನಕಲಿ ಎಂದು ಉಮಾನಾಥ ಕೋಟ್ಯಾನ್ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು