8:44 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆ ಅಸಲಿ; ಶಾಸಕ ಕೋಟ್ಯಾನ್ ಮಾನನಷ್ಟ ಮೊಕದ್ದಮೆ ಹೂಡಲಿ: ಮಿಥುನ್ ರೈ ಸವಾಲು

22/04/2023, 10:19

ಮಂಗಳೂರು(reporterkarnataka.com):ಶಾಸಕ ಉಮಾನಾಥ ಕೋಟ್ಯಾನ್ ಅವರ ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ದಾಖಲೆ ಅಸಲಿಯಾಗಿದ್ದು, ಶಾಸಕರು ಮಾನನಷ್ಟ ಮೊಕದ್ದಮೆ ಹಾಕುವ ಕೆಲಸವನ್ನು ಬೇಗನೆ ಮಾಡಲಿ. ಅವರ ಸವಾಲನ್ನು ಸ್ವೀಕರಿಸಲು ಸಿದ್ದ ಎಂದು ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪ್ರತಿ ಸವಾಲು ಹಾಕಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಸರಕಾರದ ಹಂತದಲ್ಲಿ ನಡೆಸಿರುವ ಪತ್ರಗಳ ದೃಢೀಕೃತ ಪ್ರತಿಗಳನ್ನು ಪಡೆದು ಹೇಳಿಕೆ ನೀಡಿದ್ದೇನೆ ಎಂದರು.
ಆಧಾರ ರಹಿತ ಹೇಳಿಕೆ ನೀಡುವುದಕ್ಕೆ ನನಗೆ ಉಮಾನಾಥ ಕೋಟ್ಯಾನ್ ಅವರ ಮೇಲೆ ಯಾವುದೇ ವೈಯಕ್ತಿ ದ್ವೇಷ ಇಲ್ಲ. ಈ ಬಗ್ಗೆ ಯಾವ ದೈವದ ಮುಂದೆ ಈ ಪ್ರದೇಶದ ಜನರ ಮುಂದೆ ನಮ್ಮ ಮಾತುಗಳನ್ನು ಪುನರುಚ್ಚರಿಸುತ್ತೇವೆ. ನಾವು ಸತ್ಯವನ್ನೇ ಹೇಳುತ್ತಿದ್ದೇವೆ. ಯಾರನ್ನೂ ತೇಜೋವಧೆ ಮಾಡುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಕರ್ನಿರೆ, ಅತಿಕಾರಿ ಬೆಟ್ಟು, ಬಳ್ಕುಂಜೆ, ಕೊಲ್ಲೂರು, ಉಳಿಪ್ಪಾಡಿಯಲ್ಲಿ 800 ರಿಂದ 900 ಎಕರೆ ಭೂಮಿ ಕೈಗಾರಿಕಾ ಉದ್ದೇಶಕ್ಕೆ ನೀಡಲು ಜನರು ಸಿದ್ದರಾಗಿದ್ದಾರೆ. ಲಭ್ಯ ವಿರುವ ಈ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಅಂದಿನ ಕೈಗಾರಿಕಾ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಬರೆದಿರುವ ಪತ್ರ ಪ್ರತಿಯನ್ನು ಮತ್ತು ಮುಖ್ಯಮಂತ್ರಿ ವತಿಯಿಂದ ಶಾಸಕ ಉಮಾನಾಥ ಕೊಟ್ಯಾನ್ ರಿಗೆ ನೀಡಲಾದ ಟಿಪ್ಪಣಿ ಪ್ರತಿಗಳನ್ನು ಸುದ್ದಿಗೋಷ್ಠಿಯಲ್ಲಿ ಹಾಜರು ಪಡಿಸಿದದರು. ಈ ದಾಖಲೆಗಳನ್ನು ನಕಲಿ ಎಂದು ಉಮಾನಾಥ ಕೋಟ್ಯಾನ್ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು