5:55 PM Monday7 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ

ಇತ್ತೀಚಿನ ಸುದ್ದಿ

ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ದಾಖಲೆ ಅಸಲಿ; ಶಾಸಕ ಕೋಟ್ಯಾನ್ ಮಾನನಷ್ಟ ಮೊಕದ್ದಮೆ ಹೂಡಲಿ: ಮಿಥುನ್ ರೈ ಸವಾಲು

22/04/2023, 10:19

ಮಂಗಳೂರು(reporterkarnataka.com):ಶಾಸಕ ಉಮಾನಾಥ ಕೋಟ್ಯಾನ್ ಅವರ ಬೇನಾಮಿ ಆಸ್ತಿ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾದ ದಾಖಲೆ ಅಸಲಿಯಾಗಿದ್ದು, ಶಾಸಕರು ಮಾನನಷ್ಟ ಮೊಕದ್ದಮೆ ಹಾಕುವ ಕೆಲಸವನ್ನು ಬೇಗನೆ ಮಾಡಲಿ. ಅವರ ಸವಾಲನ್ನು ಸ್ವೀಕರಿಸಲು ಸಿದ್ದ ಎಂದು ಮೂಡುಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಪ್ರತಿ ಸವಾಲು ಹಾಕಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಕೃಷಿ ಭೂಮಿಯನ್ನು ಕೈಗಾರಿಕೆಗಾಗಿ ಸ್ವಾಧೀನ ಪಡಿಸಿಕೊಳ್ಳಲು ಸರಕಾರದ ಹಂತದಲ್ಲಿ ನಡೆಸಿರುವ ಪತ್ರಗಳ ದೃಢೀಕೃತ ಪ್ರತಿಗಳನ್ನು ಪಡೆದು ಹೇಳಿಕೆ ನೀಡಿದ್ದೇನೆ ಎಂದರು.
ಆಧಾರ ರಹಿತ ಹೇಳಿಕೆ ನೀಡುವುದಕ್ಕೆ ನನಗೆ ಉಮಾನಾಥ ಕೋಟ್ಯಾನ್ ಅವರ ಮೇಲೆ ಯಾವುದೇ ವೈಯಕ್ತಿ ದ್ವೇಷ ಇಲ್ಲ. ಈ ಬಗ್ಗೆ ಯಾವ ದೈವದ ಮುಂದೆ ಈ ಪ್ರದೇಶದ ಜನರ ಮುಂದೆ ನಮ್ಮ ಮಾತುಗಳನ್ನು ಪುನರುಚ್ಚರಿಸುತ್ತೇವೆ. ನಾವು ಸತ್ಯವನ್ನೇ ಹೇಳುತ್ತಿದ್ದೇವೆ. ಯಾರನ್ನೂ ತೇಜೋವಧೆ ಮಾಡುವ ಅಗತ್ಯ ಕಾಂಗ್ರೆಸ್ ಪಕ್ಷಕ್ಕೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಕರ್ನಿರೆ, ಅತಿಕಾರಿ ಬೆಟ್ಟು, ಬಳ್ಕುಂಜೆ, ಕೊಲ್ಲೂರು, ಉಳಿಪ್ಪಾಡಿಯಲ್ಲಿ 800 ರಿಂದ 900 ಎಕರೆ ಭೂಮಿ ಕೈಗಾರಿಕಾ ಉದ್ದೇಶಕ್ಕೆ ನೀಡಲು ಜನರು ಸಿದ್ದರಾಗಿದ್ದಾರೆ. ಲಭ್ಯ ವಿರುವ ಈ ಭೂಮಿಯನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಅಂದಿನ ಕೈಗಾರಿಕಾ ಸಚಿವರಾಗಿದ್ದ ಜಗದೀಶ್ ಶೆಟ್ಟರ್ ಅವರಿಗೆ ಬರೆದಿರುವ ಪತ್ರ ಪ್ರತಿಯನ್ನು ಮತ್ತು ಮುಖ್ಯಮಂತ್ರಿ ವತಿಯಿಂದ ಶಾಸಕ ಉಮಾನಾಥ ಕೊಟ್ಯಾನ್ ರಿಗೆ ನೀಡಲಾದ ಟಿಪ್ಪಣಿ ಪ್ರತಿಗಳನ್ನು ಸುದ್ದಿಗೋಷ್ಠಿಯಲ್ಲಿ ಹಾಜರು ಪಡಿಸಿದದರು. ಈ ದಾಖಲೆಗಳನ್ನು ನಕಲಿ ಎಂದು ಉಮಾನಾಥ ಕೋಟ್ಯಾನ್ ಸಾಬೀತು ಪಡಿಸಲಿ ಎಂದು ಸವಾಲು ಹಾಕಿದರು.

ಇತ್ತೀಚಿನ ಸುದ್ದಿ

ಜಾಹೀರಾತು