8:42 PM Saturday14 - February 2026
ಬ್ರೇಕಿಂಗ್ ನ್ಯೂಸ್
ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ…

ಇತ್ತೀಚಿನ ಸುದ್ದಿ

ಪ್ರಾಣಿಗಳಿಗೆ ಹಿಂಸೆ ನೀಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಖಡಕ್ ಎಚ್ಚರಿಕೆ

15/07/2021, 08:15

ಮಂಗಳೂರು (reporterkarnataka news): ಕೋವಿಡ್-19 ಸೋಂಕು ಅಥವಾ ಇನ್ನಿತರ ಯಾವುದೇ ಕಾರಣಗಳಿಂದಾಗಿ ಸಾಕು ಪ್ರಾಣಿ ಹಾಗೂ ಪಕ್ಷಿಗಳ ಪೋಷಣೆ – ರಕ್ಷಣೆ ನಿಲ್ಲಬಾರದು, ಅವುಗಳ ಪೋಷಣೆಗೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರವನ್ನು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. 
ಅವರು ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪ್ರಾಣಿಗಳು ರಸ್ತೆ ಬದಿಯಲ್ಲಿ ಅನಾಥವಾಗಿ ಬಿದ್ದಿರುವುದು ಕಂಡುಬರುತ್ತಿದ್ದು, ಅಂತಹ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆಗೆ ಪ್ರಾಣಿ ದಯಾ ಸಂಘವು ಕಾರ್ಯನಿರ್ವಹಿಸುವುದರೊಂದಿಗೆ, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು, ಪ್ರಾಣಿ ಹಿಂಸೆಗಳ ದುಷ್ಟರಿಣಾಮಗಳ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.
ಪ್ರಾಣಿಗಳನ್ನು ಮಾರಾಟ ಮಾಡುವುದು ಅಥವಾ ಕೊಲ್ಲುವುದು ಕಂಡುಬಂದಲ್ಲಿ ಪ್ರಾಣಿ ದಯಾ ಸಂಘದ ಸದಸ್ಯರು ಪ್ರಕರಣ ದಾಖಲಿಸಬೇಕು, ಗೋಶಾಲೆ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳು ಕಾಳಜಿ ವಹಿಸಬೇಕು, ಜಿಲ್ಲೆಯಲ್ಲಿ ಪ್ರತೀ ಗ್ರಾಮದಲ್ಲಿ ಗೋಮಾಳ ನಿರ್ಮಿಸಿ ಅದರ ನಿರ್ವಹಣೆಯನ್ನು ಸ್ಥಳೀಯ ದೇವಸ್ಥಾನಗಳಿಗೆ ನೀಡಬೇಕು, ಅದಕ್ಕೆ ಸಂಬಂಧಿಸಿದ ಖರ್ಚು-ವೆಚ್ಚವನ್ನು ಜಿಲ್ಲಾಡಳಿತದ ವತಿಯಿಂದ ಭರಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಸ ವಿಂಗಡಣೆ ಸರಿಯಾದ ಕ್ರಮದಲ್ಲಿ ಆಗದಿರುವ ಕಾರಣ ಗಾಜು, ಪ್ಲಾಸ್ಟಿಕ್, ಮೂಳೆ ಇನ್ನಿತರ ಅಪಾಯಕಾರಿ ವಸ್ತುಗಳನ್ನು ಪ್ರಾಣಿಗಳು ಸೇವಿಸಿ ಸಾವಿಗೀಡಾಗುತ್ತಿವೆ, ಹಾಗಾಗಿ ತ್ಯಾಜ್ಯ ವಿಂಗಡಣೆಗೆ ಸರಿಯಾದ ಕ್ರಮ ಆಗಬೇಕು, ಪ್ರತೀ ಪಂಚಾಯತ್ ವ್ಯಾಪ್ತಿಯಲ್ಲೂ ಸೂಕ್ತವಾಗಿ ಕಸ ವಿಲೇವಾರಿ ಮಾಡುವ ವ್ಯವಸ್ಥೆ ಆಗಬೇಕು ಎಂದು ಹೇಳಿದರು.
ನಗರದ ಫುಟ್‍ಪಾತ್‍ಗಳಲ್ಲಿರುವ ಪೆಟ್ ಶಾಪ್‍ಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಅನಿರೀಕ್ಷಿತ ಭೇಟಿ ನೀಡಿ, ಅವುಗಳು ನೋಂದಣಿಯಾಗಿರುವ ಬಗ್ಗೆ ಮಾಹಿತಿ ಪಡೆಯಬೇಕು, ನೋಂದಣಿ ಆಗದ ಪೆಟ್ ಶಾಪ್‍ಗಳ ವಿರುದ್ಧ ಕಾನುನು ಬದ್ದ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 
ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ನಗರದ ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರು, ಪ್ರಾಣಿದಯಾ ಸಂಘದ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು